ಮಾರ್ಚ್ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವನಕ್ಕೆ ಚಾಲನೆ ನೀಡಲಿದ್ದಾರೆ. ಆದರೆ, ಮುಖ್ಯ ಸಭಾಂಗಣದ ಕಾಮಗಾರಿಯೇ ಪೂರ್ಣಗೊಂಡಿಲ್ಲ. ವೇದಿಕೆಗೆ ನೆಲಹಾಸು ಹಾಕಿಲ್ಲ, ವಿದ್ಯುತ್ ಸಂಪರ್ಕವೂ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಜೊತೆಗೆ ಸಭಾಂಗಣಕ್ಕೆ ಕುರ್ಚಿ ಆಳವಡಿಸಿಲ್ಲ. ಹೊರಾಂಗಣದ ಕಾಮಗಾರಿಯನ್ನು ಮುಗಿಸಿ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆಗೆ ಮುಂದಾಗಿದ್ದಾರೆ ಎಂದು ಹೋರಾಟಗಾರರು ದೂರುತ್ತಾರೆ.