ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂತಹ ರಾಜಕೀಯ ಕ್ರಮಗಳನ್ನು ರಾಜಕೀಯವಾಗಿಯೇ ಎದುರಿಸುತ್ತೇನೆ. ಬ್ಯಾಂಕಿನಲ್ಲಿ ನಾನು ಅವ್ಯವಹಾರ ಮಾಡಿಲ್ಲ. ರೈತರಿಗೆ, ಬಡವರಿಗೆ, ಸ್ವಸಹಾಯ ಸಂಘಗಳು, ವ್ಯವಸಾಯ ಸೇವಾ ಸಹಕಾರ ಸಂಸ್ಥೆಗಳಿಗೆ ಸಹಾಯ ಮಾಡಲು ಸ್ವಲ್ಪ ನಿಯಮ ಮೀರಿರಬಹುದು. ಅದನ್ನು ಬಿಟ್ಟರೆ ಬೇರೇನಿಲ್ಲ’ ಎಂದು ಹೇಳಿದರು.