<p>ತುಮಕೂರು: ಈ ಹಿಂದೆ ನೀಡಿದ್ದ ಭರವಸೆಯಂತೆ ಶಿರಾ ತಾಲ್ಲೂಕು ಮದಲೂರು ಕೆರೆಗೆ ಹೇಮಾವತಿಯಿಂದ ನೀರು ಹರಿಸಬೇಕು. ಇಲ್ಲವಾದರೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ಗೌಡ ಇಲ್ಲಿ ಶನಿವಾರ ಅಸಮಾಧಾನ ಹೊರ ಹಾಕಿದರು.</p>.<p>‘ಶಿರಾ ಉಪಚುನಾವಣೆ ಸಮಯದಲ್ಲಿ ನೀರು ಹರಿಸುವುದಾಗಿ ಅಲ್ಲಿನ ಜನರಿಗೆ ಹೇಳಿದ್ದೇವೆ. ಅದರಂತೆ ಬಿಡಬೇಕಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜನರೇ ಸರಿಯಾದ ಪಾಠ ಕಲಿಸುತ್ತಾರೆ. ಆ ಬಗ್ಗೆ ನಮಗೆ ಎಚ್ಚರ ಇರಬೇಕು’ ಎಂದು ತಮ್ಮದೇ ಪಕ್ಷದ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಪರೋಕ್ಷವಾಗಿ ಗುಡುಗಿದರು.</p>.<p>ಮದಲೂರು ಕೆರೆಗೆ ನೀರು ಹರಿಸಲು ಕಾನೂನು ತೊಡಕುಗಳಿದ್ದರೆ, ನೀರು ಹಂಚಿಕೆ ಆಗದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರೇ ಪರಿಹರಿಸಬೇಕು. ಅವರೇ ಕಾನೂನು ಸಚಿವರಾಗಿದ್ದು, ನಿಯಮಗಳು ಗೊತ್ತಿವೆ. ಕಾನೂನು ತೊಡಕುಗಳನ್ನು ನಿವಾರಿಸಿ ನೀರು ಬಿಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೂ ಅಧ್ಯಕ್ಷರನ್ನು ನೇಮಕ ಮಾಡಬೇಕು. ಕೊಟ್ಟ ಭರವಸೆಯಿಂದ ಹಿಂದೆ ಸರಿಯಬಾರದು. ಈ ಬಗ್ಗೆ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರ ಜತೆಗೂ ಚರ್ಚಿಸಲಾಗುವುದು ಎಂದು ಹೇಳಿದರು.</p>.<p>ಮುಖಂಡ ಎಂ.ಆರ್.ಹುಲಿನಾಯ್ಕರ್, ‘ನೂತನ ಸಚಿವರನ್ನು ಪರಿಚಯಿಸುವ ಜನಾಶೀರ್ವಾದ ಯಾತ್ರೆ ಆರಂಭಿಸಲಾಗುತ್ತಿದ್ದು, ಇದೇ 17ರಂದು ಜಿಲ್ಲೆಗೆ ಬರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ. ಸಚಿವರು ನ್ಯಾಯಬೆಲೆ ಅಂಗಡಿ, ಲಸಿಕಾ ಕೇಂದ್ರಕ್ಕೆ ಭೇಟಿನೀಡಿ ಪರಿಶೀಲಿಸಲಿ<br />ದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ವಿವರಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ನಲ್ಲಿ ಹೊಸ ಸಚಿವರನ್ನು ಪರಿಚಯಿಸಲು ಮುಂದಾದರೂ ವಿರೋಧ ಪಕ್ಷಗಳು ಅವಕಾಶ ಮಾಡಿಕೊಡದೆ ಗದ್ದಲ ನಡೆಸಿದವು. ಹಾಗಾಗಿಜನಾಶೀರ್ವಾದ ಯಾತ್ರೆ ಮೂಲಕ ಸಚಿವರನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.</p>.<p>ಮುಖಂಡರಾದ ಎಂ.ಬಿ.ನಂದೀಶ್, ಹೆಬ್ಬಾಕ ರವಿ, ಲಕ್ಷ್ಮೀಶ್, ಕೊಪ್ಪಲ್ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಈ ಹಿಂದೆ ನೀಡಿದ್ದ ಭರವಸೆಯಂತೆ ಶಿರಾ ತಾಲ್ಲೂಕು ಮದಲೂರು ಕೆರೆಗೆ ಹೇಮಾವತಿಯಿಂದ ನೀರು ಹರಿಸಬೇಕು. ಇಲ್ಲವಾದರೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ಗೌಡ ಇಲ್ಲಿ ಶನಿವಾರ ಅಸಮಾಧಾನ ಹೊರ ಹಾಕಿದರು.</p>.<p>‘ಶಿರಾ ಉಪಚುನಾವಣೆ ಸಮಯದಲ್ಲಿ ನೀರು ಹರಿಸುವುದಾಗಿ ಅಲ್ಲಿನ ಜನರಿಗೆ ಹೇಳಿದ್ದೇವೆ. ಅದರಂತೆ ಬಿಡಬೇಕಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜನರೇ ಸರಿಯಾದ ಪಾಠ ಕಲಿಸುತ್ತಾರೆ. ಆ ಬಗ್ಗೆ ನಮಗೆ ಎಚ್ಚರ ಇರಬೇಕು’ ಎಂದು ತಮ್ಮದೇ ಪಕ್ಷದ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಪರೋಕ್ಷವಾಗಿ ಗುಡುಗಿದರು.</p>.<p>ಮದಲೂರು ಕೆರೆಗೆ ನೀರು ಹರಿಸಲು ಕಾನೂನು ತೊಡಕುಗಳಿದ್ದರೆ, ನೀರು ಹಂಚಿಕೆ ಆಗದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರೇ ಪರಿಹರಿಸಬೇಕು. ಅವರೇ ಕಾನೂನು ಸಚಿವರಾಗಿದ್ದು, ನಿಯಮಗಳು ಗೊತ್ತಿವೆ. ಕಾನೂನು ತೊಡಕುಗಳನ್ನು ನಿವಾರಿಸಿ ನೀರು ಬಿಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೂ ಅಧ್ಯಕ್ಷರನ್ನು ನೇಮಕ ಮಾಡಬೇಕು. ಕೊಟ್ಟ ಭರವಸೆಯಿಂದ ಹಿಂದೆ ಸರಿಯಬಾರದು. ಈ ಬಗ್ಗೆ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರ ಜತೆಗೂ ಚರ್ಚಿಸಲಾಗುವುದು ಎಂದು ಹೇಳಿದರು.</p>.<p>ಮುಖಂಡ ಎಂ.ಆರ್.ಹುಲಿನಾಯ್ಕರ್, ‘ನೂತನ ಸಚಿವರನ್ನು ಪರಿಚಯಿಸುವ ಜನಾಶೀರ್ವಾದ ಯಾತ್ರೆ ಆರಂಭಿಸಲಾಗುತ್ತಿದ್ದು, ಇದೇ 17ರಂದು ಜಿಲ್ಲೆಗೆ ಬರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ. ಸಚಿವರು ನ್ಯಾಯಬೆಲೆ ಅಂಗಡಿ, ಲಸಿಕಾ ಕೇಂದ್ರಕ್ಕೆ ಭೇಟಿನೀಡಿ ಪರಿಶೀಲಿಸಲಿ<br />ದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ವಿವರಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ನಲ್ಲಿ ಹೊಸ ಸಚಿವರನ್ನು ಪರಿಚಯಿಸಲು ಮುಂದಾದರೂ ವಿರೋಧ ಪಕ್ಷಗಳು ಅವಕಾಶ ಮಾಡಿಕೊಡದೆ ಗದ್ದಲ ನಡೆಸಿದವು. ಹಾಗಾಗಿಜನಾಶೀರ್ವಾದ ಯಾತ್ರೆ ಮೂಲಕ ಸಚಿವರನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.</p>.<p>ಮುಖಂಡರಾದ ಎಂ.ಬಿ.ನಂದೀಶ್, ಹೆಬ್ಬಾಕ ರವಿ, ಲಕ್ಷ್ಮೀಶ್, ಕೊಪ್ಪಲ್ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>