<p><strong>ತುಮಕೂರು:</strong> ಜಗತ್ತಿನ ಆರೋಗ್ಯ, ಭವಿಷ್ಯ ಔಷಧ ವಿಜ್ಞಾನದ ಮೇಲೆ ಅವಲಂಬಿತವಾಗಿದೆ ಎಂದು ಮಂಗಳೂರಿನ ಪಿ.ಎ.ಕಾಲೇಜ್ ಆಫ್ ಫಾರ್ಮಸಿ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್ ಹೇಳಿದರು.</p>.<p>ನಗರದ ಶ್ರೀದೇವಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಪದವಿ ಪ್ರದಾನ ಸಮಾರಂಭ, ಹೊಸ ಕೋರ್ಸ್ಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎಷ್ಟು ಎತ್ತರಕ್ಕೆ ಬೆಳೆದರೂ ಮಾನವೀಯತೆ, ಅನುಕಂಪ, ಕರುಣೆ ಮತ್ತು ಸಾಮಾಜಿಕ ಕಾಳಜಿ ಮರೆಯಬಾರದು ಎಂದರು.</p>.<p>ಶ್ರೀದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ‘ಔಷಧ ವಿಜ್ಞಾನ ಬಹಳ ವೇಗವಾಗಿ ಬೆಳೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳಿಗೆ 500ಕ್ಕೂ ಹೆಚ್ಚು ಔಷಧಿಗಳು ದೊರೆಯುತ್ತಿದೆ. ಹೆಚ್ಚಿನ ಜ್ಞಾನ, ಕೌಶಲ ರೂಢಿಸಿಕೊಂಡರೆ ಬದುಕು ಹಸನಾಗುತ್ತದೆ’ ಎಂದು ತಿಳಿಸಿದರು.</p>.<p>ವಿಜ್ಞಾನಿ ಎನ್.ಎಸ್.ಪ್ರಕಾಶ್, ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ.ಎಂ.ರಮಣ್, ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಗಳಾದ ಎಂ.ಅಂಬಿಕಾ, ಡಾ.ಲಾವಣ್ಯ, ಔಷಧ ವಿಜ್ಞಾನ ಮಹಾವಿದ್ಯಾಲಯದ ನಿರ್ದೇಶಕ ಬಿ.ಗೋಪಾಲಕೃಷ್ಣ, ಪ್ರಾಂಶುಪಾಲ ಶಿವಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಗತ್ತಿನ ಆರೋಗ್ಯ, ಭವಿಷ್ಯ ಔಷಧ ವಿಜ್ಞಾನದ ಮೇಲೆ ಅವಲಂಬಿತವಾಗಿದೆ ಎಂದು ಮಂಗಳೂರಿನ ಪಿ.ಎ.ಕಾಲೇಜ್ ಆಫ್ ಫಾರ್ಮಸಿ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್ ಹೇಳಿದರು.</p>.<p>ನಗರದ ಶ್ರೀದೇವಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಪದವಿ ಪ್ರದಾನ ಸಮಾರಂಭ, ಹೊಸ ಕೋರ್ಸ್ಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎಷ್ಟು ಎತ್ತರಕ್ಕೆ ಬೆಳೆದರೂ ಮಾನವೀಯತೆ, ಅನುಕಂಪ, ಕರುಣೆ ಮತ್ತು ಸಾಮಾಜಿಕ ಕಾಳಜಿ ಮರೆಯಬಾರದು ಎಂದರು.</p>.<p>ಶ್ರೀದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ‘ಔಷಧ ವಿಜ್ಞಾನ ಬಹಳ ವೇಗವಾಗಿ ಬೆಳೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳಿಗೆ 500ಕ್ಕೂ ಹೆಚ್ಚು ಔಷಧಿಗಳು ದೊರೆಯುತ್ತಿದೆ. ಹೆಚ್ಚಿನ ಜ್ಞಾನ, ಕೌಶಲ ರೂಢಿಸಿಕೊಂಡರೆ ಬದುಕು ಹಸನಾಗುತ್ತದೆ’ ಎಂದು ತಿಳಿಸಿದರು.</p>.<p>ವಿಜ್ಞಾನಿ ಎನ್.ಎಸ್.ಪ್ರಕಾಶ್, ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ.ಎಂ.ರಮಣ್, ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಗಳಾದ ಎಂ.ಅಂಬಿಕಾ, ಡಾ.ಲಾವಣ್ಯ, ಔಷಧ ವಿಜ್ಞಾನ ಮಹಾವಿದ್ಯಾಲಯದ ನಿರ್ದೇಶಕ ಬಿ.ಗೋಪಾಲಕೃಷ್ಣ, ಪ್ರಾಂಶುಪಾಲ ಶಿವಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>