<p>ತುಮಕೂರು: ಕಾರ್ಮಿಕ ಕಲ್ಯಾಣ ಮಂಡಳಿಯ ಹಣ ಬಳಕೆ ಮಾಡಿಕೊಂಡು ಖರೀದಿಸಿರುವ ಆಹಾರ ಕಿಟ್, ಟೂಲ್ ಕಿಟ್, ಸುರಕ್ಷತಾ ಕಿಟ್ಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ಹಗರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಕಾರ್ಮಿಕರು ಸೆ. 20ರಂದು ‘ಮುಖ್ಯಮಂತ್ರಿ ಮನೆ ಚಲೋ’ ಹಮ್ಮಿಕೊಂಡಿದ್ದಾರೆ.</p>.<p>ಕಟ್ಟಡ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಹೋರಾಟ ನಡೆಸುತ್ತಿವೆ ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಿಐಟಿಯು ಮುಖಂಡ ಕೆ. ಮಹಾಂತೇಶ್, ‘ಕಾರ್ಮಿಕರ ಹೆಸರಿನಲ್ಲಿ ಸುಮಾರು ₹ 2,600 ಕೋಟಿ ಖರ್ಚು ಮಾಡಿ ಟೆಂಡರ್ ಕರೆಯದೆ ಕಿಟ್ಗಳನ್ನು ಖರೀದಿಸಲಾಗಿದೆ. ಮಾರುಕಟ್ಟೆ ಬೆಲೆಗಿಂತ ಹೆಚ್ಚು ಹಣ ಕೊಡಲಾಗಿದೆ. ಈ ಖರೀದಿಯಲ್ಲಿ ಭಾರಿ ಅವ್ಯವಹಾರವೇ ನಡೆದಿದ್ದು, ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸುವ ಸಲುವಾಗಿ ಮುಖ್ಯಮಂತ್ರಿ ಮನೆ ಚಲೋ ನಡೆಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>ಕೋವಿಡ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ಕಾರ್ಮಿಕರ ಕುಟುಂಬಗಳಿಗೆ ಕನಿಷ್ಠ ₹10 ಸಾವಿರ ಪರಿಹಾರ ನೀಡಬೇಕು. ಬೋಗಸ್ ಕಾರ್ಡುಗಳಿಗೆ ಕಡಿವಾಣ ಹಾಕಬೇಕು. ಕಲ್ಯಾಣ ಮಂಡಳಿಯಲ್ಲಿ ಸವಲತ್ತುಗಳಿಗಾಗಿ ಬಂದಿರುವ ಬಾಕಿ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ಮದುವೆ, ಅಪಘಾತ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಐಎನ್ಟಿಯುಸಿ ಮುಖಂಡ ಶಾಮಣ್ಣರೆಡ್ಡಿ, ‘ಕಾರ್ಮಿಕ ಸಂಘಟನೆಗಳ ಹೋರಾಟದ ಫಲವಾಗಿ 1996ರಲ್ಲಿ ಕಲ್ಯಾಣ ಮಂಡಳಿ ಅಸ್ತಿತ್ವಕ್ಕೆ ಬಂದಿದೆ. ಈವರೆಗೆ ₹ 2 ಸಾವಿರ ಕೋಟಿ ಬಡ್ಡಿಯೂ ಸೇರಿದಂತೆ ₹ 10,400 ಕೋಟಿ ಸಂಗ್ರಹವಾಗಿದೆ. ಕಲ್ಯಾಣ ಮಂಡಳಿಯ ನಿಯಮದ ಪ್ರಕಾರ ಈ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಖರ್ಚು ಮಾಡಬೇಕಿದೆ. ಆದರೆ, ಹಣವನ್ನು ಕಾರ್ಮಿಕರ ಖಾತೆಗೆ ನೇರವಾಗಿ ವರ್ಗಾಯಿಸದೆ ವಸ್ತುಗಳನ್ನು ಖರೀದಿಸಿ ನಿಯಮ ಉಲ್ಲಂಘಿಸಲಾಗಿದೆ. ಕಾರು, ಆಂಬುಲೆನ್ಸ್ಗಳನ್ನು ಖರೀದಿ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟದ ಬಗ್ಗೆ ಜಾಗೃತಿ ಮೂಡಿಸಿದ್ದು, 10 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸೆ. 20ರ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.</p>.<p>ಎಐಟಿಯುಸಿ ಮುಖಂಡ ಗಿರೀಶ್, ‘ಕಾರ್ಮಿಕ ಇಲಾಖೆಯಿಂದ ಹಂಚಿರುವ 21 ಲಕ್ಷ ದಿನಸಿ ಕಿಟ್ಗಳು ಕಳಪೆಯಾಗಿವೆ. ಅಲ್ಲದೆ, ಕಾರ್ಮಿಕ ಸಚಿವರ ಕ್ಷೇತ್ರದಲ್ಲಿಯೇ 65 ಸಾವಿರ ಕಿಟ್ ಹಂಚಲಾಗಿದೆ. ಅಲ್ಲಿ ಇಷ್ಟೊಂದು ಜನ ಕಾರ್ಮಿಕರು ಇದ್ದಾರೆ ಎಂಬ ಅನುಮಾನ ಮೂಡುತ್ತದೆ’<br />ಎಂದರು.</p>.<p>ಎಐಯುಟಿಯುಸಿ ಷಣ್ಮುಗಂ, ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದರು.</p>.<p>ಐಎನ್ಟಿಯುಸಿ ರಾಜು, ಸಿಐಟಿಯು ಬಿ. ಉಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಕಾರ್ಮಿಕ ಕಲ್ಯಾಣ ಮಂಡಳಿಯ ಹಣ ಬಳಕೆ ಮಾಡಿಕೊಂಡು ಖರೀದಿಸಿರುವ ಆಹಾರ ಕಿಟ್, ಟೂಲ್ ಕಿಟ್, ಸುರಕ್ಷತಾ ಕಿಟ್ಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ಹಗರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಕಾರ್ಮಿಕರು ಸೆ. 20ರಂದು ‘ಮುಖ್ಯಮಂತ್ರಿ ಮನೆ ಚಲೋ’ ಹಮ್ಮಿಕೊಂಡಿದ್ದಾರೆ.</p>.<p>ಕಟ್ಟಡ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಹೋರಾಟ ನಡೆಸುತ್ತಿವೆ ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಿಐಟಿಯು ಮುಖಂಡ ಕೆ. ಮಹಾಂತೇಶ್, ‘ಕಾರ್ಮಿಕರ ಹೆಸರಿನಲ್ಲಿ ಸುಮಾರು ₹ 2,600 ಕೋಟಿ ಖರ್ಚು ಮಾಡಿ ಟೆಂಡರ್ ಕರೆಯದೆ ಕಿಟ್ಗಳನ್ನು ಖರೀದಿಸಲಾಗಿದೆ. ಮಾರುಕಟ್ಟೆ ಬೆಲೆಗಿಂತ ಹೆಚ್ಚು ಹಣ ಕೊಡಲಾಗಿದೆ. ಈ ಖರೀದಿಯಲ್ಲಿ ಭಾರಿ ಅವ್ಯವಹಾರವೇ ನಡೆದಿದ್ದು, ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸುವ ಸಲುವಾಗಿ ಮುಖ್ಯಮಂತ್ರಿ ಮನೆ ಚಲೋ ನಡೆಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>ಕೋವಿಡ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ಕಾರ್ಮಿಕರ ಕುಟುಂಬಗಳಿಗೆ ಕನಿಷ್ಠ ₹10 ಸಾವಿರ ಪರಿಹಾರ ನೀಡಬೇಕು. ಬೋಗಸ್ ಕಾರ್ಡುಗಳಿಗೆ ಕಡಿವಾಣ ಹಾಕಬೇಕು. ಕಲ್ಯಾಣ ಮಂಡಳಿಯಲ್ಲಿ ಸವಲತ್ತುಗಳಿಗಾಗಿ ಬಂದಿರುವ ಬಾಕಿ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ಮದುವೆ, ಅಪಘಾತ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಐಎನ್ಟಿಯುಸಿ ಮುಖಂಡ ಶಾಮಣ್ಣರೆಡ್ಡಿ, ‘ಕಾರ್ಮಿಕ ಸಂಘಟನೆಗಳ ಹೋರಾಟದ ಫಲವಾಗಿ 1996ರಲ್ಲಿ ಕಲ್ಯಾಣ ಮಂಡಳಿ ಅಸ್ತಿತ್ವಕ್ಕೆ ಬಂದಿದೆ. ಈವರೆಗೆ ₹ 2 ಸಾವಿರ ಕೋಟಿ ಬಡ್ಡಿಯೂ ಸೇರಿದಂತೆ ₹ 10,400 ಕೋಟಿ ಸಂಗ್ರಹವಾಗಿದೆ. ಕಲ್ಯಾಣ ಮಂಡಳಿಯ ನಿಯಮದ ಪ್ರಕಾರ ಈ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಖರ್ಚು ಮಾಡಬೇಕಿದೆ. ಆದರೆ, ಹಣವನ್ನು ಕಾರ್ಮಿಕರ ಖಾತೆಗೆ ನೇರವಾಗಿ ವರ್ಗಾಯಿಸದೆ ವಸ್ತುಗಳನ್ನು ಖರೀದಿಸಿ ನಿಯಮ ಉಲ್ಲಂಘಿಸಲಾಗಿದೆ. ಕಾರು, ಆಂಬುಲೆನ್ಸ್ಗಳನ್ನು ಖರೀದಿ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟದ ಬಗ್ಗೆ ಜಾಗೃತಿ ಮೂಡಿಸಿದ್ದು, 10 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸೆ. 20ರ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.</p>.<p>ಎಐಟಿಯುಸಿ ಮುಖಂಡ ಗಿರೀಶ್, ‘ಕಾರ್ಮಿಕ ಇಲಾಖೆಯಿಂದ ಹಂಚಿರುವ 21 ಲಕ್ಷ ದಿನಸಿ ಕಿಟ್ಗಳು ಕಳಪೆಯಾಗಿವೆ. ಅಲ್ಲದೆ, ಕಾರ್ಮಿಕ ಸಚಿವರ ಕ್ಷೇತ್ರದಲ್ಲಿಯೇ 65 ಸಾವಿರ ಕಿಟ್ ಹಂಚಲಾಗಿದೆ. ಅಲ್ಲಿ ಇಷ್ಟೊಂದು ಜನ ಕಾರ್ಮಿಕರು ಇದ್ದಾರೆ ಎಂಬ ಅನುಮಾನ ಮೂಡುತ್ತದೆ’<br />ಎಂದರು.</p>.<p>ಎಐಯುಟಿಯುಸಿ ಷಣ್ಮುಗಂ, ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದರು.</p>.<p>ಐಎನ್ಟಿಯುಸಿ ರಾಜು, ಸಿಐಟಿಯು ಬಿ. ಉಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>