ತುಮಕೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ದೂರುಗಳು ಬರುತ್ತಿವೆ. ಎಲ್ಲರಿಗೂ ಮರಳು, ಜಲ್ಲಿ ಬೇಕು. ಆದ್ದರಿಂದ ಕಾನೂನು ಸರಳಗೊಳಿಸಿ ಕಾನೂನು ಬದ್ಧವಾಗಿಯೇ ಸಕ್ರಮಕ್ಕೆ ಕ್ರಮಕೈಗೊಳ್ಳಲು ಚಿಂತಿಸಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.