<p><strong>ತುಮಕೂರು</strong>: ‘ಭಾರತದ ಕೌಟುಂಬಿಕ ವ್ಯವಸ್ಥೆ ಅಪೂರ್ವವಾದದ್ದು. ರಾಷ್ಟ್ರದ ಸಂಸ್ಕೃತಿಯನ್ನು ನಿರ್ಲಕ್ಷಿಸದೆಅಧ್ಯಯನ ಮಾಡಿ, ಉತ್ತಮ ರೀತಿಯಲ್ಲಿ ಮುಂದುವರಿಸಬೇಕು’ ಎಂದು ಅಮೆರಿಕದ ಕೊಲರೆಡೊ ವಿಶ್ವವಿದ್ಯಾಲಯದ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಹಿರಿಯ ವಿಜ್ಞಾನಿ, ಸಂಶೋಧಕ ಡಾ.ವಿಲಿಯಂ ಕ್ರ್ಯಾನ್ಟ್ಜ್ ಹೇಳಿದರು.</p>.<p>ನಗರದರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದಶಿಕ್ಷಕರಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ‘ಜೀವನವು ನನಗೆ ಕಲಿಸಿದ ಪಾಠಗಳು’ ಕುರಿತ ವಿಶೇಷ ಪ್ರವಚನ ಮತ್ತು ಸಂವಾದದಲ್ಲಿ ಮಾತನಾಡಿದರು.</p>.<p>‘ಹತ್ತು ಸಾವಿರ ವರ್ಷಗಳ ಇತಿಹಾಸವುಳ್ಳ, ಅತ್ಯಂತ ಪ್ರಾಚೀನವೂ, ಅದ್ಭುತವೂ ಆದ ಭಾರತೀಯ ಸಂಸ್ಕೃತಿಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ. ದೇಶದ ವಿದ್ಯಾರ್ಥಿಗಳಲ್ಲಿ ಉತ್ತಮ ಬೌದ್ಧಿಕ ಸಾಮರ್ಥ್ಯವಿದೆ. ಭಾರತೀಯರು ಈ ರಾಷ್ಟ್ರಕ್ಕಾಗಿ ಬದುಕುವ ಕಲೆ ಮೈಗೂಡಿಸಿಕೊಳ್ಳಬೇಕು. ಉಪನಿಷತ್ತುಗಳನ್ನು ಗಮನಿಸಿರುವ ನನಗೆ ನಮ್ಮೆಲ್ಲ ಪ್ರಶ್ನೆಗಳಿಗೆ ನಮ್ಮ ಆಂತರ್ಯವೇ ಉತ್ತರಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ತಿಳಿಸಿದರು.</p>.<p>ತಂದೆ, ತಾಯಿಯನ್ನು ಗೌರವಿಸಿ. ಅವರು ದೊಡ್ಡ ವಿದ್ಯಾವಂತರಲ್ಲದಿದ್ದರೂ ತಮ್ಮ ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಲು ಶ್ರಮಿಸುತ್ತಾರೆ, ಬೆಂಬಲಿಸುತ್ತಾರೆ ಎಂದರು.</p>.<p>ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ, ಸ್ವಾಮಿ ಧೀರಾನಂದ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಅಕ್ಷಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸರಾವ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಟಿ.ಆರ್.ಲೀಲಾವತಿ, ಪ್ರಾಧ್ಯಾಪಕರಾದ ರಮ್ಯಾ ಕಲ್ಲೂರ್, ಸುಧೀರ್ ರಂಗನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಭಾರತದ ಕೌಟುಂಬಿಕ ವ್ಯವಸ್ಥೆ ಅಪೂರ್ವವಾದದ್ದು. ರಾಷ್ಟ್ರದ ಸಂಸ್ಕೃತಿಯನ್ನು ನಿರ್ಲಕ್ಷಿಸದೆಅಧ್ಯಯನ ಮಾಡಿ, ಉತ್ತಮ ರೀತಿಯಲ್ಲಿ ಮುಂದುವರಿಸಬೇಕು’ ಎಂದು ಅಮೆರಿಕದ ಕೊಲರೆಡೊ ವಿಶ್ವವಿದ್ಯಾಲಯದ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಹಿರಿಯ ವಿಜ್ಞಾನಿ, ಸಂಶೋಧಕ ಡಾ.ವಿಲಿಯಂ ಕ್ರ್ಯಾನ್ಟ್ಜ್ ಹೇಳಿದರು.</p>.<p>ನಗರದರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದಶಿಕ್ಷಕರಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ‘ಜೀವನವು ನನಗೆ ಕಲಿಸಿದ ಪಾಠಗಳು’ ಕುರಿತ ವಿಶೇಷ ಪ್ರವಚನ ಮತ್ತು ಸಂವಾದದಲ್ಲಿ ಮಾತನಾಡಿದರು.</p>.<p>‘ಹತ್ತು ಸಾವಿರ ವರ್ಷಗಳ ಇತಿಹಾಸವುಳ್ಳ, ಅತ್ಯಂತ ಪ್ರಾಚೀನವೂ, ಅದ್ಭುತವೂ ಆದ ಭಾರತೀಯ ಸಂಸ್ಕೃತಿಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ. ದೇಶದ ವಿದ್ಯಾರ್ಥಿಗಳಲ್ಲಿ ಉತ್ತಮ ಬೌದ್ಧಿಕ ಸಾಮರ್ಥ್ಯವಿದೆ. ಭಾರತೀಯರು ಈ ರಾಷ್ಟ್ರಕ್ಕಾಗಿ ಬದುಕುವ ಕಲೆ ಮೈಗೂಡಿಸಿಕೊಳ್ಳಬೇಕು. ಉಪನಿಷತ್ತುಗಳನ್ನು ಗಮನಿಸಿರುವ ನನಗೆ ನಮ್ಮೆಲ್ಲ ಪ್ರಶ್ನೆಗಳಿಗೆ ನಮ್ಮ ಆಂತರ್ಯವೇ ಉತ್ತರಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ತಿಳಿಸಿದರು.</p>.<p>ತಂದೆ, ತಾಯಿಯನ್ನು ಗೌರವಿಸಿ. ಅವರು ದೊಡ್ಡ ವಿದ್ಯಾವಂತರಲ್ಲದಿದ್ದರೂ ತಮ್ಮ ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಲು ಶ್ರಮಿಸುತ್ತಾರೆ, ಬೆಂಬಲಿಸುತ್ತಾರೆ ಎಂದರು.</p>.<p>ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ, ಸ್ವಾಮಿ ಧೀರಾನಂದ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಅಕ್ಷಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸರಾವ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಟಿ.ಆರ್.ಲೀಲಾವತಿ, ಪ್ರಾಧ್ಯಾಪಕರಾದ ರಮ್ಯಾ ಕಲ್ಲೂರ್, ಸುಧೀರ್ ರಂಗನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>