ತುಮಕೂರು: ಹೇಮಾವತಿ ನಾಲಾ ಅಗಲೀಕರಣ, ತುಂಗಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ತುರ್ತು ಅನುಷ್ಠಾನ ಮಾಡಬೇಕು, ಭೂ ಸ್ವಾಧೀನ ಕಾಯ್ದೆಗೆ ಸರ್ಕಾರ ತಂದಿರುವ ತಿದ್ದುಪಡಿ ವಾಪಸ್ ಪಡೆಯಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.