<p><strong>ತುಮಕೂರು</strong>: ಜಿಲ್ಲೆಯ ಹಸಿರೀಕರಣಕ್ಕೆ ಜಿಲ್ಲಾ ಪಂಚಾಯಿತಿಯಿಂದ ‘ಹಸಿರು ಗ್ರಾಮ’ ಯೋಜನೆ ರೂಪಿಸಿದ್ದು, ಜೂನ್ 5ರಂದು ಪರಿಸರ ದಿನದ ಅಂಗವಾಗಿ 5 ಲಕ್ಷ ಗಿಡ ನೆಡುವ ಗುರಿ ಹೊಂದಲಾಗಿದೆ.</p>.<p>‘ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1 ಸಾವಿರ ಗಿಡ ನೆಡುವ ಮೂಲಕ ಹಸಿರೀಕರಣಕ್ಕೆ ಆದ್ಯತೆ ನೀಡಬೇಕು. ಪರಿಸರ ಸಂರಕ್ಷಣೆ ಮುಂದಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳ ಮಾರ್ಗಸೂಚಿ ಸಭೆಯಲ್ಲಿ ಮಾತನಾಡಿದರು.</p>.<p>ನರೇಗಾ ಒಳಗೊಂಡಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಇಮ್ಮಡಿಯಾಗುವಂತೆ ಶ್ರಮಿಸಬೇಕು. ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದ ಜಿಲ್ಲೆಯು ರಾಜ್ಯದ ಗಮನ ಸೆಳೆದಿದೆ. ಈಗಾಗಲೇ 70 ಸಾವಿರ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ₹461 ಕೋಟಿ ಅನುದಾನದ ಕಾಮಗಾರಿಗಳು ನಡೆಯುತ್ತಿವೆ ಎಂದರು.</p>.<p>ಜೂನ್ 2ನೇ ವಾರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತದೆ. ನರೇಗಾ ಯೋಜನೆಯ ಮಿಷನ್ 500 ಅಭಿಯಾನ ಹೀಗೆ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಈಗಾಗಲೇ 1 ಸಾವಿರ ಶಾಲಾಭಿವೃದ್ಧಿ ಕಾಮಗಾರಿಗಳು ಆರಂಭವಾಗಿವೆ. 3 ಲಕ್ಷ ಮೀಟರ್ ಚರಂಡಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಎಲ್ಲ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.</p>.<p>ಜಿ.ಪಂ ಉಪಕಾರ್ಯದರ್ಶಿ ಹಾಲಸಿದ್ಧಪ್ಪ ಪೂಜೇರಿ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರವೀಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಬಿ.ಸಿ.ಶಾರದಮ್ಮ, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯ ಹಸಿರೀಕರಣಕ್ಕೆ ಜಿಲ್ಲಾ ಪಂಚಾಯಿತಿಯಿಂದ ‘ಹಸಿರು ಗ್ರಾಮ’ ಯೋಜನೆ ರೂಪಿಸಿದ್ದು, ಜೂನ್ 5ರಂದು ಪರಿಸರ ದಿನದ ಅಂಗವಾಗಿ 5 ಲಕ್ಷ ಗಿಡ ನೆಡುವ ಗುರಿ ಹೊಂದಲಾಗಿದೆ.</p>.<p>‘ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1 ಸಾವಿರ ಗಿಡ ನೆಡುವ ಮೂಲಕ ಹಸಿರೀಕರಣಕ್ಕೆ ಆದ್ಯತೆ ನೀಡಬೇಕು. ಪರಿಸರ ಸಂರಕ್ಷಣೆ ಮುಂದಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳ ಮಾರ್ಗಸೂಚಿ ಸಭೆಯಲ್ಲಿ ಮಾತನಾಡಿದರು.</p>.<p>ನರೇಗಾ ಒಳಗೊಂಡಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಇಮ್ಮಡಿಯಾಗುವಂತೆ ಶ್ರಮಿಸಬೇಕು. ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದ ಜಿಲ್ಲೆಯು ರಾಜ್ಯದ ಗಮನ ಸೆಳೆದಿದೆ. ಈಗಾಗಲೇ 70 ಸಾವಿರ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ₹461 ಕೋಟಿ ಅನುದಾನದ ಕಾಮಗಾರಿಗಳು ನಡೆಯುತ್ತಿವೆ ಎಂದರು.</p>.<p>ಜೂನ್ 2ನೇ ವಾರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತದೆ. ನರೇಗಾ ಯೋಜನೆಯ ಮಿಷನ್ 500 ಅಭಿಯಾನ ಹೀಗೆ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಈಗಾಗಲೇ 1 ಸಾವಿರ ಶಾಲಾಭಿವೃದ್ಧಿ ಕಾಮಗಾರಿಗಳು ಆರಂಭವಾಗಿವೆ. 3 ಲಕ್ಷ ಮೀಟರ್ ಚರಂಡಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಎಲ್ಲ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.</p>.<p>ಜಿ.ಪಂ ಉಪಕಾರ್ಯದರ್ಶಿ ಹಾಲಸಿದ್ಧಪ್ಪ ಪೂಜೇರಿ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರವೀಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಬಿ.ಸಿ.ಶಾರದಮ್ಮ, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>