ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'2013ರಲ್ಲಿ ಕೊರಟಗೆರೆ ಕ್ಷೇತ್ರದ ಸೋಲಿನ ಚರ್ಚೆ ಈಗ ಅನವಶ್ಯ'

ಗೊಂದಲ ಮೂಡಿಸಲು ವಿರೋಧಿಗಳ ಯತ್ನ: ಡಾ.ಜಿ. ಪರಮೇಶ್ವರ ಸ್ಪಷ್ಟನೆ
Last Updated 20 ಡಿಸೆಂಬರ್ 2020, 3:46 IST
ಅಕ್ಷರ ಗಾತ್ರ

ತುಮಕೂರು: ‘2013ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು ಎನ್ನುವ ಬಗ್ಗೆ ಈಗ ಚರ್ಚೆ ನಡೆಸುವುದು ಅನವಶ್ಯ‌. ಈ ವಿಚಾರವನ್ನು ರಾಜ್ಯದಾದ್ಯಂತ ಚರ್ಚೆ ಮಾಡುವ ಅವಶ್ಯವೂ ಇಲ್ಲ’ ಎಂದು ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2018ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಸಿದ್ದರಾಮಯ್ಯ ಸೋಲಿನ ಬಗ್ಗೆ ಯಾವುದೇ ವರದಿ ಬಂದಿರಲಿಲ್ಲ. ಅವರು ಬೇರೆ ಬೇರೆ ಕಾರಣಗಳಿಂದ ಸೋತಿದ್ದಾರೆ. ನಮ್ಮ ಪಕ್ಷದವರೇ ಸೇರಿ ಅವರನ್ನು ಸೋಲಿಸುತ್ತಾರೆ ಎನ್ನುವ ವರದಿ ಆಗ ಬಂದಿರಲಿಲ್ಲ’ ಎಂದು ಸ್ಪಷ್ಟಪಡಿಸಿದರು.

‘2013ರ ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂದುಕೆ.ಎಸ್‌.ಈಶ್ವರಪ್ಪ ಸೇರಿದಂತೆ ಕೆಲವು ವಿರೋಧ ಪಕ್ಷದ ನಾಯಕರು ಹೇಳಿಕೆ ನೀಡಿದ್ದಾರೆ. ಅನಗತ್ಯವಾಗಿ ಹೇಳಿಕೆ ಕೊಡುವ ಮೂಲಕ ನಮ್ಮಲ್ಲಿ ಈಗ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದರು.

‘ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಪ್ರಬಲ ನಾಯಕರಾಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರವಾಗಿ ನಾವು ಚರ್ಚಿಸಿದ್ದೆವು. ಉತ್ತರ ಕರ್ನಾಟಕದಿಂದ ಆಯ್ಕೆಯಾಗುವ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಬಾದಾಮಿಯಲ್ಲಿ ಅವರು ಸ್ಪರ್ಧಿಸಿದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT