<p><strong>ಗುಬ್ಬಿ:</strong> ‘ಯುವಕರು ಸ್ವಾತಂತ್ರ್ಯದ ಮಹತ್ವ ಅರಿತು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಪದವಿ ಕಾಲೇಜಿನ ಪ್ರಾಂಶುಪಾಲ<br />ಡಾ.ಟಿ. ವೆಂಕಟಾಚಲಯ್ಯ ತಿಳಿಸಿದರು.</p>.<p>ಪಟ್ಟಣದ ಕಾಲೇಜು ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ‘ಫಿಟ್ ಇಂಡಿಯಾ ರನ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದಾರೆ. ಅವರ ಶ್ರಮದ ಪ್ರತಿಫಲ ಅನುಭವಿಸುತ್ತಿರುವ ನಾವು ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕು. ಯುವಶಕ್ತಿ ದೇಶದ ಅಮೂಲ್ಯ ಸಂಪತ್ತಾಗಿದೆ. ಇದನ್ನು ಸುವ್ಯವಸ್ಥಿತ ರೀತಿಯಲ್ಲಿ ಬಳಸಿಕೊಂಡಾಗ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯ ಎಂದರು.</p>.<p>ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸುವ ಮನಸ್ಥಿತಿಯನ್ನು ಯುವಕರು ರೂಢಿಸಿ ಕೊಳ್ಳ ಬೇಕಿದೆ ಎಂದು ತಿಳಿಸಿದರು.</p>.<p>ಎನ್ಎಸ್ಎಸ್ ಅಧಿಕಾರಿ ಪ್ರೊ.ಲಿಂಗರಾಜು ಮಾತನಾಡಿ, ಗಾಂಧೀಜಿ, ಗೋಖಲೆ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅವರ ಆದರ್ಶ ಮೈಗೂಡಿಸಿಕೊಂಡು ದೇಶದ ರಕ್ಷಣೆಗೆ ಮುಂದಾಗಬೇಕಿದೆ. ಯುವಕರು ಒಗ್ಗೂಡಿದರೆ ಮಾತ್ರ ದೇಶ ಪ್ರಗತಿಯ ಹಾದಿಯಲ್ಲಿ ಸಾಗಲು ಸಾಧ್ಯ ಎಂದರು.</p>.<p>ಎನ್ಎಸ್ಎಸ್ ಅಧಿಕಾರಿಗಳಾದ ಕಾಳಪ್ಪ, ಅನಿತಾಲಕ್ಷ್ಮಿ, ಎನ್ಸಿಸಿ ಅಧಿಕಾರಿ ಮೋಹನ್ ಕುಮಾರ್, ನ್ಯಾಕ್ ಸಂಚಾಲಕ ಪ್ರೊ.ಶ್ರೀನಿವಾಸಯ್ಯ, ಕಾಲೇಜಿನ ವ್ಯವಸ್ಥಾಪಕ ಶಿವಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ‘ಯುವಕರು ಸ್ವಾತಂತ್ರ್ಯದ ಮಹತ್ವ ಅರಿತು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಪದವಿ ಕಾಲೇಜಿನ ಪ್ರಾಂಶುಪಾಲ<br />ಡಾ.ಟಿ. ವೆಂಕಟಾಚಲಯ್ಯ ತಿಳಿಸಿದರು.</p>.<p>ಪಟ್ಟಣದ ಕಾಲೇಜು ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ‘ಫಿಟ್ ಇಂಡಿಯಾ ರನ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದಾರೆ. ಅವರ ಶ್ರಮದ ಪ್ರತಿಫಲ ಅನುಭವಿಸುತ್ತಿರುವ ನಾವು ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕು. ಯುವಶಕ್ತಿ ದೇಶದ ಅಮೂಲ್ಯ ಸಂಪತ್ತಾಗಿದೆ. ಇದನ್ನು ಸುವ್ಯವಸ್ಥಿತ ರೀತಿಯಲ್ಲಿ ಬಳಸಿಕೊಂಡಾಗ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯ ಎಂದರು.</p>.<p>ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸುವ ಮನಸ್ಥಿತಿಯನ್ನು ಯುವಕರು ರೂಢಿಸಿ ಕೊಳ್ಳ ಬೇಕಿದೆ ಎಂದು ತಿಳಿಸಿದರು.</p>.<p>ಎನ್ಎಸ್ಎಸ್ ಅಧಿಕಾರಿ ಪ್ರೊ.ಲಿಂಗರಾಜು ಮಾತನಾಡಿ, ಗಾಂಧೀಜಿ, ಗೋಖಲೆ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅವರ ಆದರ್ಶ ಮೈಗೂಡಿಸಿಕೊಂಡು ದೇಶದ ರಕ್ಷಣೆಗೆ ಮುಂದಾಗಬೇಕಿದೆ. ಯುವಕರು ಒಗ್ಗೂಡಿದರೆ ಮಾತ್ರ ದೇಶ ಪ್ರಗತಿಯ ಹಾದಿಯಲ್ಲಿ ಸಾಗಲು ಸಾಧ್ಯ ಎಂದರು.</p>.<p>ಎನ್ಎಸ್ಎಸ್ ಅಧಿಕಾರಿಗಳಾದ ಕಾಳಪ್ಪ, ಅನಿತಾಲಕ್ಷ್ಮಿ, ಎನ್ಸಿಸಿ ಅಧಿಕಾರಿ ಮೋಹನ್ ಕುಮಾರ್, ನ್ಯಾಕ್ ಸಂಚಾಲಕ ಪ್ರೊ.ಶ್ರೀನಿವಾಸಯ್ಯ, ಕಾಲೇಜಿನ ವ್ಯವಸ್ಥಾಪಕ ಶಿವಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>