<p><strong>ತುಮಕೂರು:</strong> ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 50 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 3,470ಕ್ಕೆ, ಮೃತಪಟ್ಟವರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.</p>.<p>ಮೃತಪಟ್ಟವರಲ್ಲಿ ಇಬ್ಬರು ಪುರುಷರು, ಮೂವರು ಮಹಿಳೆಯರಿದ್ದಾರೆ. ತಿಪಟೂರು ತಾಲ್ಲೂಕು ಶಾರದಾನಗರ ಬಡಾವಣೆ 68 ವರ್ಷದ ಮಹಿಳೆ, ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ 40 ವರ್ಷದ ವ್ಯಕ್ತಿ, ಗುಬ್ಬಿ ತಾಲ್ಲೂಕಿನ 37 ವರ್ಷದ ವ್ಯಕ್ತಿ, ತುಮಕೂರು ತಾಲ್ಲೂಕು ಅಂತರಸನಹಳ್ಳಿ ಗ್ರಾಮದ 75 ವರ್ಷದ ವೃದ್ಧೆ, ತುಮಕೂರು ಹೆಗಡೆ ಕಾಲೊನಿ 44 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.</p>.<p class="Subhead">ಗುಣಮುಖ ಪ್ರಮಾಣ ಏರಿಕೆ: ಸೋಮವಾರ 103 ಮಂದಿ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದರು. ಈವರೆಗೆ ದಾಖಲಾದ 3,470 ಮಂದಿ ಸೋಂಕಿತರಲ್ಲಿ ಈಗಾಗಲೇ 2,462 ಮಂದಿ ಗುಣಮುಖರಾಗಿದ್ದಾರೆ. 900 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಂದೆಡೆ ದಾಖಲೆ ಪ್ರಮಾಣದಲ್ಲಿ ಸೋಂಕಿತರು ಗುಣಮುಖ ರಾಗುತ್ತಿದ್ದರೆ, ಇನ್ನೊಂದೆಡೆ ಮೃತ ಪಡುತ್ತಿರುವವರ ಸಂಖ್ಯೆಯೂ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.08</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 50 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 3,470ಕ್ಕೆ, ಮೃತಪಟ್ಟವರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.</p>.<p>ಮೃತಪಟ್ಟವರಲ್ಲಿ ಇಬ್ಬರು ಪುರುಷರು, ಮೂವರು ಮಹಿಳೆಯರಿದ್ದಾರೆ. ತಿಪಟೂರು ತಾಲ್ಲೂಕು ಶಾರದಾನಗರ ಬಡಾವಣೆ 68 ವರ್ಷದ ಮಹಿಳೆ, ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ 40 ವರ್ಷದ ವ್ಯಕ್ತಿ, ಗುಬ್ಬಿ ತಾಲ್ಲೂಕಿನ 37 ವರ್ಷದ ವ್ಯಕ್ತಿ, ತುಮಕೂರು ತಾಲ್ಲೂಕು ಅಂತರಸನಹಳ್ಳಿ ಗ್ರಾಮದ 75 ವರ್ಷದ ವೃದ್ಧೆ, ತುಮಕೂರು ಹೆಗಡೆ ಕಾಲೊನಿ 44 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.</p>.<p class="Subhead">ಗುಣಮುಖ ಪ್ರಮಾಣ ಏರಿಕೆ: ಸೋಮವಾರ 103 ಮಂದಿ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದರು. ಈವರೆಗೆ ದಾಖಲಾದ 3,470 ಮಂದಿ ಸೋಂಕಿತರಲ್ಲಿ ಈಗಾಗಲೇ 2,462 ಮಂದಿ ಗುಣಮುಖರಾಗಿದ್ದಾರೆ. 900 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಂದೆಡೆ ದಾಖಲೆ ಪ್ರಮಾಣದಲ್ಲಿ ಸೋಂಕಿತರು ಗುಣಮುಖ ರಾಗುತ್ತಿದ್ದರೆ, ಇನ್ನೊಂದೆಡೆ ಮೃತ ಪಡುತ್ತಿರುವವರ ಸಂಖ್ಯೆಯೂ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.08</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>