<p>ತುಮಕೂರು: ಒಕ್ಕಲಿಗ ಸಮುದಾಯಕ್ಕೆ ಇನ್ನೂ ಹೆಚ್ಚಿನ ಮೀಸಲಾತಿ ನೀಡಬೇಕು ಎಂದು ಮಂಗಳನಾಥ ಸ್ವಾಮೀಜಿ ಇಲ್ಲಿ ಭಾನುವಾರ ಒತ್ತಾಯಿಸಿದರು.</p>.<p>ನಗರದ ಉಪ್ಪಾರಹಳ್ಳಿ– ಗೆದ್ದಲಹಳ್ಳಿ ಮುಖ್ಯ ರಸ್ತೆಯಲ್ಲಿ ನಿರ್ಮಿಸಿರುವ ಅಖಿಲ ಕರ್ನಾಟಕ ಸರ್ಪ ಒಕ್ಕಲಿಗ/ ಸಲುಪರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಸಮಾಜದ ಬಡವರಿಗೆ ಶಿಕ್ಷಣ ಕೊಡಿಸಲು ಒಕ್ಕಲಿಗ ಸಮುದಾಯದ ಸ್ಥಿತಿವಂತರು ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಬೇಕು. ರಾಜಕೀಯವಾಗಿ ಒಟ್ಟಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ನಮ್ಮ ಸಮಾಜವನ್ನು ಮುಂದೆ ತರಬೇಕು. ಎಲ್ಲರೂ ಒಗ್ಗೂಡಿ ಸಮುದಾಯದ ಅಭ್ಯುದಯಕ್ಕೆ ಶ್ರಮಿಸಬೇಕು ಎಂದು ಸಲಹೆ ಮಾಡಿದರು.</p>.<p>ಮಕ್ಕಳಿಗೆ ಜ್ಞಾನ ನೀಡುವ ಕಾರ್ಯವನ್ನು ಸಮುದಾಯಗಳು ಮಾಡುವುದು ಅನುಕರಣೀಯ. ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿ ಸಹ ದೇವಾಲಯಗಳಿಗಿಂತ ಶಿಕ್ಷಣ ದೇಗುಲಗಳಿಗೆ ಆದ್ಯತೆ ನೀಡಿದ್ದಾರೆ. ಗುರುಗಳ ಮಾರ್ಗದರ್ಶನ, ಹಿರಿಯರ ಆಶಯದಂತೆ ಸಮಾಜ ಮುನ್ನಡೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ‘ಸಣ್ಣಪುಟ್ಟ ಸಮುದಾಯಗಳು ಸಂಘಟಿತರಾಗಿ ಶೈಕ್ಷಣಿಕವಾಗಿ ಮಕ್ಕಳಿಗೆ ಸಹಾಯವಾಗುವಂತಹ ಕೆಲಸ ಕಾರ್ಯಗಳನ್ನು ಮಾಡಬೇಕು. ಶೈಕ್ಷಣಿಕ ಸಂಸ್ಥೆ ಆರಂಭಿಸುವ ಬಗ್ಗೆ ಚಿಂತಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಚಿಕ್ಕಪುಟ್ಟ ಸಮುದಾಯಗಳು ಜನರಿಂದ ದೇಣಿಗೆ ಸಂಗ್ರಹಿಸಲು ಶಕ್ತಿ ಇರುವುದಿಲ್ಲ. ಹಾಗಾಗಿ, ಸರ್ಕಾರದಿಂದ ಹೆಚ್ಚಿನ ಅನುದಾನ ತರಬೇಕು. ಇದಕ್ಕೆ ಜನಪ್ರತಿನಿಧಿಗಳನ್ನು ಬಳಸಿಕೊಳ್ಳಬೇಕು. ಜನನಾಯಕರು ಇಂತಹ ಸಮುದಾಯಗಳ ನೆರವಿಗೆ ನಿಲ್ಲಬೇಕು ಎಂದು ಹೇಳಿದರು.</p>.<p>ಒಕ್ಕಲಿಗ ಸಮುದಾಯ ಒಟ್ಟಾದರೆ ಹೆಚ್ಚಿನ ಶಕ್ತಿ ಬರಲಿದೆ. ಎಲ್ಲರೂ ಸಂಘಟಿತರಾಗಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಬಡ ಮಕ್ಕಳಿಗೆ ಅನುಕೂಲ ಕಲ್ಪಿಸಲು ಹಾಸ್ಟೆಲ್ ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ನಂಜಾವಧೂತ ಸ್ವಾಮೀಜಿ, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಎಸ್.ಎಲ್.ಭೋಜೇಗೌಡ, ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಡಾ.ಎಂ.ಆರ್.ಹುಲಿನಾಯ್ಕರ್, ರಫೀಕ್ ಅಹ್ಮದ್, ಅಖಿಲ ಕರ್ನಾಟಕ ಸರ್ಪ<br />ಒಕ್ಕಲಿಗ/ಸಲುಪರ ಸಂಘದ ಗೌರವಾ<br />ಧ್ಯಕ್ಷ ಮುರಗಪ್ಪಗೌಡ, ಅಧ್ಯಕ್ಷ ಎಸ್.ಜಿ.ಪರಮೇಶ್ವರಪ್ಪ, ಪ್ರಧಾನ ಕಾರ್ಯ<br />ದರ್ಶಿ ಎಸ್.ರಾಜಕುಮಾರ್ ಮಂಜು<br />ನಾಥ್ ಮತ್ತಿತರರು ಭಾಗವಹಿಸಿದ್ದರು.</p>.<p>ಹತ್ತು ಕೊಠಡಿ ಇರುವ ಸುಸಜ್ಜಿತ ಹಾಸ್ಟೆಲ್ ಕಟ್ಟಡದಲ್ಲಿ 50 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಒಕ್ಕಲಿಗ ಸಮುದಾಯಕ್ಕೆ ಇನ್ನೂ ಹೆಚ್ಚಿನ ಮೀಸಲಾತಿ ನೀಡಬೇಕು ಎಂದು ಮಂಗಳನಾಥ ಸ್ವಾಮೀಜಿ ಇಲ್ಲಿ ಭಾನುವಾರ ಒತ್ತಾಯಿಸಿದರು.</p>.<p>ನಗರದ ಉಪ್ಪಾರಹಳ್ಳಿ– ಗೆದ್ದಲಹಳ್ಳಿ ಮುಖ್ಯ ರಸ್ತೆಯಲ್ಲಿ ನಿರ್ಮಿಸಿರುವ ಅಖಿಲ ಕರ್ನಾಟಕ ಸರ್ಪ ಒಕ್ಕಲಿಗ/ ಸಲುಪರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಸಮಾಜದ ಬಡವರಿಗೆ ಶಿಕ್ಷಣ ಕೊಡಿಸಲು ಒಕ್ಕಲಿಗ ಸಮುದಾಯದ ಸ್ಥಿತಿವಂತರು ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಬೇಕು. ರಾಜಕೀಯವಾಗಿ ಒಟ್ಟಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ನಮ್ಮ ಸಮಾಜವನ್ನು ಮುಂದೆ ತರಬೇಕು. ಎಲ್ಲರೂ ಒಗ್ಗೂಡಿ ಸಮುದಾಯದ ಅಭ್ಯುದಯಕ್ಕೆ ಶ್ರಮಿಸಬೇಕು ಎಂದು ಸಲಹೆ ಮಾಡಿದರು.</p>.<p>ಮಕ್ಕಳಿಗೆ ಜ್ಞಾನ ನೀಡುವ ಕಾರ್ಯವನ್ನು ಸಮುದಾಯಗಳು ಮಾಡುವುದು ಅನುಕರಣೀಯ. ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿ ಸಹ ದೇವಾಲಯಗಳಿಗಿಂತ ಶಿಕ್ಷಣ ದೇಗುಲಗಳಿಗೆ ಆದ್ಯತೆ ನೀಡಿದ್ದಾರೆ. ಗುರುಗಳ ಮಾರ್ಗದರ್ಶನ, ಹಿರಿಯರ ಆಶಯದಂತೆ ಸಮಾಜ ಮುನ್ನಡೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ‘ಸಣ್ಣಪುಟ್ಟ ಸಮುದಾಯಗಳು ಸಂಘಟಿತರಾಗಿ ಶೈಕ್ಷಣಿಕವಾಗಿ ಮಕ್ಕಳಿಗೆ ಸಹಾಯವಾಗುವಂತಹ ಕೆಲಸ ಕಾರ್ಯಗಳನ್ನು ಮಾಡಬೇಕು. ಶೈಕ್ಷಣಿಕ ಸಂಸ್ಥೆ ಆರಂಭಿಸುವ ಬಗ್ಗೆ ಚಿಂತಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಚಿಕ್ಕಪುಟ್ಟ ಸಮುದಾಯಗಳು ಜನರಿಂದ ದೇಣಿಗೆ ಸಂಗ್ರಹಿಸಲು ಶಕ್ತಿ ಇರುವುದಿಲ್ಲ. ಹಾಗಾಗಿ, ಸರ್ಕಾರದಿಂದ ಹೆಚ್ಚಿನ ಅನುದಾನ ತರಬೇಕು. ಇದಕ್ಕೆ ಜನಪ್ರತಿನಿಧಿಗಳನ್ನು ಬಳಸಿಕೊಳ್ಳಬೇಕು. ಜನನಾಯಕರು ಇಂತಹ ಸಮುದಾಯಗಳ ನೆರವಿಗೆ ನಿಲ್ಲಬೇಕು ಎಂದು ಹೇಳಿದರು.</p>.<p>ಒಕ್ಕಲಿಗ ಸಮುದಾಯ ಒಟ್ಟಾದರೆ ಹೆಚ್ಚಿನ ಶಕ್ತಿ ಬರಲಿದೆ. ಎಲ್ಲರೂ ಸಂಘಟಿತರಾಗಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಬಡ ಮಕ್ಕಳಿಗೆ ಅನುಕೂಲ ಕಲ್ಪಿಸಲು ಹಾಸ್ಟೆಲ್ ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ನಂಜಾವಧೂತ ಸ್ವಾಮೀಜಿ, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಎಸ್.ಎಲ್.ಭೋಜೇಗೌಡ, ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಡಾ.ಎಂ.ಆರ್.ಹುಲಿನಾಯ್ಕರ್, ರಫೀಕ್ ಅಹ್ಮದ್, ಅಖಿಲ ಕರ್ನಾಟಕ ಸರ್ಪ<br />ಒಕ್ಕಲಿಗ/ಸಲುಪರ ಸಂಘದ ಗೌರವಾ<br />ಧ್ಯಕ್ಷ ಮುರಗಪ್ಪಗೌಡ, ಅಧ್ಯಕ್ಷ ಎಸ್.ಜಿ.ಪರಮೇಶ್ವರಪ್ಪ, ಪ್ರಧಾನ ಕಾರ್ಯ<br />ದರ್ಶಿ ಎಸ್.ರಾಜಕುಮಾರ್ ಮಂಜು<br />ನಾಥ್ ಮತ್ತಿತರರು ಭಾಗವಹಿಸಿದ್ದರು.</p>.<p>ಹತ್ತು ಕೊಠಡಿ ಇರುವ ಸುಸಜ್ಜಿತ ಹಾಸ್ಟೆಲ್ ಕಟ್ಟಡದಲ್ಲಿ 50 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>