<p><strong>ತುಮಕೂರು:</strong> ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಸಮಯವನ್ನು ವಿಸ್ತರಿಸುವಂತೆ ಒತ್ತಡ ಹೆಚ್ಚಾಗಿದೆ.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಬೆಂಗಳೂರಿನಲ್ಲಿ ಸಾರಿಗೆ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಕಾಲಾವಧಿ ವಿಸ್ತರಣೆ, ನಿಗದಿಪಡಿಸಿದ ಮೊತ್ತವನ್ನು ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ.</p>.<p>ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗಾಗಿ ವಾಹನಗಳನ್ನು ಜಿಲ್ಲಾ ಕೇಂದ್ರಗಳಿಗೆ ತರಬೇಕಾಗಿದೆ. ಕೇವಲ ಈ ಒಂದು ಕೆಲಸಕ್ಕಾಗಿ ಗ್ರಾಮೀಣ ಭಾಗದಿಂದ ವಾಹನಗಳನ್ನು ತರಲು ಆಗುತ್ತಿಲ್ಲ. ಇದರಿಂದ ತಾಲ್ಲೂಕು ಕೇಂದ್ರಗಳಲ್ಲಿಯೂ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.</p>.<p>‘ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆ. 17 ಕಡೆಯ ದಿನಾಂಕವಾಗಿದ್ದು, ಇದನ್ನು ವಿಸ್ತರಿಸಬೇಕು. ಕನಿಷ್ಠ ಇನ್ನು ಮೂರು ತಿಂಗಳು ಕಾಲ ಅವಕಾಶ ನೀಡಬೇಕು’ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಟಿ.ಜೆ.ಗಿರೀಶ್ ಎಂದು ಒತ್ತಾಯಿಸಿದ್ದಾರೆ.</p>.<p>ನಂಬರ್ ಪ್ಲೇಟ್ ಅಳವಡಿಕೆಗಾಗಿ ಆನ್ಲೈನ್ನಲ್ಲಿ ನೋಂದಣಿ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಅಲ್ಲೂ ಸರ್ವರ್ ಸಮಸ್ಯೆಯಾಗುತ್ತಿದೆ. ವಾಹನಗಳು ರಸ್ತೆಗೆ ಇಳಿದರೆ ಪೊಲೀಸರು ಈಗಾಗಲೇ ಎಚ್ಎಸ್ಆರ್ಪಿ ನಂಬರ್, ಆನ್ಲೈನ್ನಲ್ಲಿ ನೋಂದಣಿಯಾದ ಪತ್ರ ಕೇಳುತ್ತಿದ್ದಾರೆ. ಇದರಿಂದ ವಾಹನಗಳ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಸಮಯವನ್ನು ವಿಸ್ತರಿಸುವಂತೆ ಒತ್ತಡ ಹೆಚ್ಚಾಗಿದೆ.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಬೆಂಗಳೂರಿನಲ್ಲಿ ಸಾರಿಗೆ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಕಾಲಾವಧಿ ವಿಸ್ತರಣೆ, ನಿಗದಿಪಡಿಸಿದ ಮೊತ್ತವನ್ನು ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ.</p>.<p>ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗಾಗಿ ವಾಹನಗಳನ್ನು ಜಿಲ್ಲಾ ಕೇಂದ್ರಗಳಿಗೆ ತರಬೇಕಾಗಿದೆ. ಕೇವಲ ಈ ಒಂದು ಕೆಲಸಕ್ಕಾಗಿ ಗ್ರಾಮೀಣ ಭಾಗದಿಂದ ವಾಹನಗಳನ್ನು ತರಲು ಆಗುತ್ತಿಲ್ಲ. ಇದರಿಂದ ತಾಲ್ಲೂಕು ಕೇಂದ್ರಗಳಲ್ಲಿಯೂ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.</p>.<p>‘ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆ. 17 ಕಡೆಯ ದಿನಾಂಕವಾಗಿದ್ದು, ಇದನ್ನು ವಿಸ್ತರಿಸಬೇಕು. ಕನಿಷ್ಠ ಇನ್ನು ಮೂರು ತಿಂಗಳು ಕಾಲ ಅವಕಾಶ ನೀಡಬೇಕು’ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಟಿ.ಜೆ.ಗಿರೀಶ್ ಎಂದು ಒತ್ತಾಯಿಸಿದ್ದಾರೆ.</p>.<p>ನಂಬರ್ ಪ್ಲೇಟ್ ಅಳವಡಿಕೆಗಾಗಿ ಆನ್ಲೈನ್ನಲ್ಲಿ ನೋಂದಣಿ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಅಲ್ಲೂ ಸರ್ವರ್ ಸಮಸ್ಯೆಯಾಗುತ್ತಿದೆ. ವಾಹನಗಳು ರಸ್ತೆಗೆ ಇಳಿದರೆ ಪೊಲೀಸರು ಈಗಾಗಲೇ ಎಚ್ಎಸ್ಆರ್ಪಿ ನಂಬರ್, ಆನ್ಲೈನ್ನಲ್ಲಿ ನೋಂದಣಿಯಾದ ಪತ್ರ ಕೇಳುತ್ತಿದ್ದಾರೆ. ಇದರಿಂದ ವಾಹನಗಳ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>