ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪಿಗೆ ಶ್ರೀಧರ್, ‘ಜನಸಂಘದಲ್ಲಿ ಕೊಂಚ ಹಿನ್ನಡೆಯಾದರೂ, ಬಿಜೆಪಿ ಕಟ್ಟಿದ ನಂತರ ಇಡೀ ಭಾರತವನ್ನು ತಲುಪಲು ಸಾಧ್ಯವಾಗಿದೆ. ಎಲ್.ಕೆ.ಅಡ್ವಾಣಿ, ಎ.ಬಿ.ವಾಜಪೇಯಿ ಅವರ ಕನಸುಗಳನ್ನು ನರೇಂದ್ರ ಮೋದಿ, ಅಮಿತ್ ಶಾ ನನಸು ಮಾಡುತ್ತಿದ್ದಾರೆ. ಅವರ ಹುಟ್ಟಿದ ದಿನವನ್ನು ಸೇವಾ ಮತ್ತು ಸಮರ್ಪಣಾ ಅಭಿಯಾನದ ಹೆಸರಿನಲ್ಲಿ 20 ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು.