<p><strong>ಪಾವಗಡ: </strong>ಆರ್.ಹೊಸಕೋಟೆಯ 6 ವರ್ಷ ಬಾಲಕಿ ಸೇರಿದಂತೆ ತಾಲ್ಲೂಕಿನ 3 ಮಂದಿಗೆ ಬುಧವಾರ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.</p>.<p>ರೆಡ್ಡಿ ಕಾಲೊನಿಯಲ್ಲಿನ ಉಪನ್ಯಾಸಕ, ಹೊಸಹಳ್ಳಿ ತಾಂಡದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಮಂಗಳವಾರ ತಾಲ್ಲೂಕಿನ ಎಸ್.ಆರ್. ಪಾಳ್ಯದ 5 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿತ್ತು.</p>.<p>ಪಟ್ಟಣದಲ್ಲಿ ಭಾರತೀಯ ವೈದ್ಯಕೀಯ ಸಂಘ, ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಪದಾಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸಭೆ ನಡೆಸಿ ನಿಯಂತ್ರಣಾ ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದರು.</p>.<p>ಸ್ವಾಮಿ ಜಪಾನಂದ ಜಿ ಮಾತನಾಡಿ, ಕಳೆದ ವಾರ ತಾಲ್ಲೂಕು ಸುರಕ್ಷಿತವಾಗಿತ್ತು. 4 ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸುರಕ್ಷತಾ ಕ್ರಮಗಳೊಂದಿಗೆ ಜನರಿಗೆ ವೈದ್ಯಕೀಯ ಸೇವೆ ನೀಡಬೇಕು ಎಂದರು.</p>.<p>ವೈದ್ಯ ಪ್ರೇಮಯೋಗಿ, ಪರಿಸ್ಥಿತಿ ಬಿಗಡಾಯಿಸುವ ಮುನ್ನ ಎಲ್ಲರೂ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ತಾಲ್ಲೂಕಿನ ಜನ ಆರೋಗ್ಯ ಕಾಪಾಡುವತ್ತ ಶ್ರಮಿಸಬೇಕು ಎಂದರು.</p>.<p>ಡಾ.ಜಿ.ವೆಂಕಟರಾಮಯ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸೇರಿ ಕೋವಿಡ್– 19 ನಿಯಂತ್ರಿಸಲು ತಂಡವಾಗಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ಆರ್.ಹೊಸಕೋಟೆಯ 6 ವರ್ಷ ಬಾಲಕಿ ಸೇರಿದಂತೆ ತಾಲ್ಲೂಕಿನ 3 ಮಂದಿಗೆ ಬುಧವಾರ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.</p>.<p>ರೆಡ್ಡಿ ಕಾಲೊನಿಯಲ್ಲಿನ ಉಪನ್ಯಾಸಕ, ಹೊಸಹಳ್ಳಿ ತಾಂಡದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಮಂಗಳವಾರ ತಾಲ್ಲೂಕಿನ ಎಸ್.ಆರ್. ಪಾಳ್ಯದ 5 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿತ್ತು.</p>.<p>ಪಟ್ಟಣದಲ್ಲಿ ಭಾರತೀಯ ವೈದ್ಯಕೀಯ ಸಂಘ, ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಪದಾಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸಭೆ ನಡೆಸಿ ನಿಯಂತ್ರಣಾ ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದರು.</p>.<p>ಸ್ವಾಮಿ ಜಪಾನಂದ ಜಿ ಮಾತನಾಡಿ, ಕಳೆದ ವಾರ ತಾಲ್ಲೂಕು ಸುರಕ್ಷಿತವಾಗಿತ್ತು. 4 ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸುರಕ್ಷತಾ ಕ್ರಮಗಳೊಂದಿಗೆ ಜನರಿಗೆ ವೈದ್ಯಕೀಯ ಸೇವೆ ನೀಡಬೇಕು ಎಂದರು.</p>.<p>ವೈದ್ಯ ಪ್ರೇಮಯೋಗಿ, ಪರಿಸ್ಥಿತಿ ಬಿಗಡಾಯಿಸುವ ಮುನ್ನ ಎಲ್ಲರೂ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ತಾಲ್ಲೂಕಿನ ಜನ ಆರೋಗ್ಯ ಕಾಪಾಡುವತ್ತ ಶ್ರಮಿಸಬೇಕು ಎಂದರು.</p>.<p>ಡಾ.ಜಿ.ವೆಂಕಟರಾಮಯ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸೇರಿ ಕೋವಿಡ್– 19 ನಿಯಂತ್ರಿಸಲು ತಂಡವಾಗಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>