<p><strong>ಕುಣಿಗಲ್:</strong> ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9ಕ್ಕೇರಿದೆ. ಬುಧವಾರ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇವರ ಮನೆಗಳನ್ನು ಸೀಲ್ಡೌನ್ ಮಾಡಕಾಗಿದೆ. ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನು ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ.</p>.<p>ಅಮೃತೂರು ಹೋಬಳಿಯ ಯಾಚನಹಳ್ಳಿಯ ದಂಪತಿಗೆ ಸೋಂಕು ಧೃಢಪಟ್ಟಿದೆ. ಪತ್ನಿ ರಾಷ್ಟ್ರೀಯ ಹೆದ್ದಾರಿಯ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಂದು ಪ್ರಕರಣದಲ್ಲಿ ಅಮೃತೂರು ಇಂದಿರಾನಗರದ ಅಂಗನವಾಡಿ ಕಾರ್ಯಕರ್ತೆಗೆ ಸೋಂಕು ತಗುಲಿದೆ. ಜಿನ್ನಾಗರ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಸಂಪರ್ಕದಿಂದ ಸೋಂಕು ಬಂದಿರಬಹುದು ಎನ್ನಲಾಗಿದೆ.</p>.<p>ಅಮೃತೂರು ಹೋಬಳಿಯ ತಿಮ್ಮೇಗೌಡನ ಪಾಳ್ಯದ 60 ವರ್ಷದ ವ್ಯಕ್ತಿ ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಆ ವ್ಯಕ್ತಿಯ ಗಂಟಲು ಸ್ರಾವವನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಬುಧವಾರ ಸೋಂಕು ದೃಢವಾಗಿದೆ. ಮಂಗಳವಾರವೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪತ್ನಿಯನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p>ಹುಲಿಯೂರುದುರ್ಗ ಬಳಿಯ ತಾವರೆಕೆರೆ ಗ್ರಾಮದ ಕ್ವೌರಿಕ ಕೆಲಸ ಮಾಡುವ 34 ವರ್ಷದ ಮತ್ತು ಸೀಗೇಪಾಳ್ಯದ 33 ವರ್ಷದ ಎಂಜಿನಿರ್ಗೆ ಸೋಂಕು ತಗುಲಿದೆ. ಇನ್ನು ಮೂರು ಜನಕ್ಕೆ ಸೋಂಕು ದೃಢಪಟ್ಟಿದೆ. ಅವರ ವಿವರಗಳು ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9ಕ್ಕೇರಿದೆ. ಬುಧವಾರ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇವರ ಮನೆಗಳನ್ನು ಸೀಲ್ಡೌನ್ ಮಾಡಕಾಗಿದೆ. ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನು ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ.</p>.<p>ಅಮೃತೂರು ಹೋಬಳಿಯ ಯಾಚನಹಳ್ಳಿಯ ದಂಪತಿಗೆ ಸೋಂಕು ಧೃಢಪಟ್ಟಿದೆ. ಪತ್ನಿ ರಾಷ್ಟ್ರೀಯ ಹೆದ್ದಾರಿಯ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಂದು ಪ್ರಕರಣದಲ್ಲಿ ಅಮೃತೂರು ಇಂದಿರಾನಗರದ ಅಂಗನವಾಡಿ ಕಾರ್ಯಕರ್ತೆಗೆ ಸೋಂಕು ತಗುಲಿದೆ. ಜಿನ್ನಾಗರ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಸಂಪರ್ಕದಿಂದ ಸೋಂಕು ಬಂದಿರಬಹುದು ಎನ್ನಲಾಗಿದೆ.</p>.<p>ಅಮೃತೂರು ಹೋಬಳಿಯ ತಿಮ್ಮೇಗೌಡನ ಪಾಳ್ಯದ 60 ವರ್ಷದ ವ್ಯಕ್ತಿ ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಆ ವ್ಯಕ್ತಿಯ ಗಂಟಲು ಸ್ರಾವವನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಬುಧವಾರ ಸೋಂಕು ದೃಢವಾಗಿದೆ. ಮಂಗಳವಾರವೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪತ್ನಿಯನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p>ಹುಲಿಯೂರುದುರ್ಗ ಬಳಿಯ ತಾವರೆಕೆರೆ ಗ್ರಾಮದ ಕ್ವೌರಿಕ ಕೆಲಸ ಮಾಡುವ 34 ವರ್ಷದ ಮತ್ತು ಸೀಗೇಪಾಳ್ಯದ 33 ವರ್ಷದ ಎಂಜಿನಿರ್ಗೆ ಸೋಂಕು ತಗುಲಿದೆ. ಇನ್ನು ಮೂರು ಜನಕ್ಕೆ ಸೋಂಕು ದೃಢಪಟ್ಟಿದೆ. ಅವರ ವಿವರಗಳು ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>