ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಲಭ್ಯ ವಂಚಿತ ಸರ್ಕಾರಿ ಶಾಲೆ: ಪೋಷಕರ ದೂರು

Last Updated 22 ಏಪ್ರಿಲ್ 2019, 16:53 IST
ಅಕ್ಷರ ಗಾತ್ರ

ಹುಳಿಯಾರು: ಹೋಬಳಿಯ ಗಾಣಧಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರುಹೊಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲ ಸೌಕರ್ಯಗಳಿಂದ ವಂಚಿತವಾಗಿ ಮಕ್ಕಳು ಸಮಸ್ಯೆ ಎದುರಿಸುವಂತಾಗಿದೆ ಎಂದು ಪೋಷಕರು ದೂರಿದ್ದಾರೆ.

ಒಂದರಿಂದ 5ನೇ ತರಗತಿವರೆಗೆ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಮೂರು ಕೊಠಡಿಗಳು ಇದ್ದು ಒಂದು ಹೊಸದಾಗಿದೆ. ಇನ್ನೆರಡು ಕೊಠಡಿಗಳು ಶಿಥಿಲಗೊಂಡಿವೆ. ಎರಡರಲ್ಲಿ ಹೆಂಚುಗಳು ಒಡೆದು ಹೋಗಿದ್ದು ಮಳೆ ಬಂದರೆ ಸೋರುತ್ತವೆ.

ಬಿಸಿಲಿಗೆ ಮಕ್ಕಳು ಒಳಗೆ ಕುಳಿತುಕೊಳ್ಳಲು ಹಿಂಸೆ ಪಡುತ್ತಿದ್ದಾರೆ. ಕೊಠಡಿಯ ತೊಲೆಗಳು ಸಂಪೂರ್ಣ ಶಿಥಿಲವಾಗಿ ಯಾವಾಗ ಮುರಿದು ಬೀಳುತ್ತವೆ ಎಂಬ ಭಯದಿಂದ ಶಿಕ್ಷಕರು ಹಾಗೂ ಮಕ್ಕಳು ಪಾಠ ಕೇಳುವಂತಾಗಿದೆ. ಕೊಠಡಿಗಳು ಸುಣ್ಣ ಬಣ್ಣ ಕಂಡು ಎಷ್ಟೋ ವರ್ಷಗಳು ಕಳೆದಿವೆ. ಶೌಚಾಲಯ ಮತ್ತು ಕಾಂಪೌಂಡ್ ವ್ಯವಸ್ಥೆ ಇಲ್ಲ. ಸಂಬಂಧಪಟ್ಟ ಮೇಲಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿಯ ದುರ್ಗೇಶ್ ದೂರಿದ್ದಾರೆ.

ಸಂಬಂಧಪಟ್ಟವರು ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗಾದರೂ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರಾದ ರಾಮಯ್ಯ, ಲೋಕೇಶ್, ಹಳೆ ವಿದ್ಯಾರ್ಥಿಗಳಾದ ವಿಜಯ್, ರಂಗಸ್ವಾಮಿ, ಸುಧೀಂದ್ರ, ಗಜೇಂದ್ರ, ಲೋಹಿತ್ ರಂಗಸ್ವಾಮಿ, ಹೇಮಂತ್, ಪಂಚಾಕ್ಷರಿ, ಸಂತೋಷ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT