ತುಮಕೂರು: ‘ಜಿಲ್ಲೆಯಲ್ಲಿ ಪ್ರಭಾವಿಗಳು, ಶಾಸಕರು, ಸಚಿವರ ಹಿಂಬಾಲಕರಿಗೆ ಟೆಂಡರ್ ಸಿಗುತ್ತಿದೆ. ಪ್ರಾಮಾಣಿಕ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ನಗರದ ಗುತ್ತಿಗೆದಾರರ ಸಂಘದ ಕಚೇರಿ ಮುಂಭಾಗ ಗುರುವಾರ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.