<p><strong>ತುಮಕೂರು</strong>: ಉದ್ಯಮ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಆವಿಷ್ಕಾರ, ಹೊಸ ಉತ್ಪನ್ನಗಳ ಉತ್ಪಾದನೆ ಮಾಡುವುದು ಅತ್ಯಗತ್ಯವಾಗಿದೆ ಎಂದು ಆವಿಷ್ಕಾರ್ ಓರಲ್ ಸಿರಪ್ಸ್ ಸಂಸ್ಥೆ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ರೆಡ್ಡಿ ಪ್ರತಿಪಾದಿಸಿದರು.</p>.<p>ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ‘ಬಯೊಚೆಸ್’ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಹೊಸ ಆವಿಷ್ಕಾರಗಳತ್ತ ಉದ್ಯಮಿಗಳು, ಉದ್ಯೋಗಿಗಳು, ಸಂಶೋಧಕರು ಮುಂದಾಗಬೇಕಿದೆ ಎಂದು ಸಲಹೆ ಮಾಡಿದರು.</p>.<p>ಉದ್ಯೋಗ, ಉದ್ಯಮದಲ್ಲಿ ಯಶಸ್ಸು ಗಳಿಸಲು ಉದ್ಯಮಶೀಲತೆಯ ಕೌಶಲ, ಮಾಹಿತಿ ಹಾಗೂ ತಂತ್ರಜ್ಞಾನದ ಬಗ್ಗೆ ಸಂಶೋಧನೆ ಮಾಡಬೇಕಿದೆ. ಇದರಿಂದಾಗಿ ಬೇಡಿಕೆಗೆ ಅನುಗುಣವಾಗಿ ಸಾಮಗ್ರಿಗಳ ಉತ್ಪಾದನೆ ಮಾಡಲು ಸಹಕಾರಿಯಾಗುತ್ತದೆ. ಜನರ ಅಗತ್ಯಕ್ಕೆ ಅನುಗುಣವಾಗಿ ವಸ್ತುಗಳನ್ನು ತಯಾರಿಸಿ ಮಾರುಕಟ್ಟೆಗೆ ತಂದರೆ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದರು.</p>.<p>ಕಾಲೇಜು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೊ.ಶಿವಕುಮಾರಯ್ಯ, ಪ್ರಾಂಶುಪಾಲ ಪ್ರೊ.ಎಸ್.ವಿ.ದಿನೇಶ್, ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಸುಧೀರ್ ಎಚ್.ರಂಗನಾಥ್, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಸ್.ಗೌರಿಶಂಕರ್, ಎಸ್.ರಾಜಶೇಖರ್, ಡಿ.ಆರ್.ಪ್ರಸನ್ನ, ವಿದ್ಯಾರ್ಥಿ ಫರ್ವಿನ್ ಖಾನ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಉದ್ಯಮ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಆವಿಷ್ಕಾರ, ಹೊಸ ಉತ್ಪನ್ನಗಳ ಉತ್ಪಾದನೆ ಮಾಡುವುದು ಅತ್ಯಗತ್ಯವಾಗಿದೆ ಎಂದು ಆವಿಷ್ಕಾರ್ ಓರಲ್ ಸಿರಪ್ಸ್ ಸಂಸ್ಥೆ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ರೆಡ್ಡಿ ಪ್ರತಿಪಾದಿಸಿದರು.</p>.<p>ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ‘ಬಯೊಚೆಸ್’ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಹೊಸ ಆವಿಷ್ಕಾರಗಳತ್ತ ಉದ್ಯಮಿಗಳು, ಉದ್ಯೋಗಿಗಳು, ಸಂಶೋಧಕರು ಮುಂದಾಗಬೇಕಿದೆ ಎಂದು ಸಲಹೆ ಮಾಡಿದರು.</p>.<p>ಉದ್ಯೋಗ, ಉದ್ಯಮದಲ್ಲಿ ಯಶಸ್ಸು ಗಳಿಸಲು ಉದ್ಯಮಶೀಲತೆಯ ಕೌಶಲ, ಮಾಹಿತಿ ಹಾಗೂ ತಂತ್ರಜ್ಞಾನದ ಬಗ್ಗೆ ಸಂಶೋಧನೆ ಮಾಡಬೇಕಿದೆ. ಇದರಿಂದಾಗಿ ಬೇಡಿಕೆಗೆ ಅನುಗುಣವಾಗಿ ಸಾಮಗ್ರಿಗಳ ಉತ್ಪಾದನೆ ಮಾಡಲು ಸಹಕಾರಿಯಾಗುತ್ತದೆ. ಜನರ ಅಗತ್ಯಕ್ಕೆ ಅನುಗುಣವಾಗಿ ವಸ್ತುಗಳನ್ನು ತಯಾರಿಸಿ ಮಾರುಕಟ್ಟೆಗೆ ತಂದರೆ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದರು.</p>.<p>ಕಾಲೇಜು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೊ.ಶಿವಕುಮಾರಯ್ಯ, ಪ್ರಾಂಶುಪಾಲ ಪ್ರೊ.ಎಸ್.ವಿ.ದಿನೇಶ್, ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಸುಧೀರ್ ಎಚ್.ರಂಗನಾಥ್, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಸ್.ಗೌರಿಶಂಕರ್, ಎಸ್.ರಾಜಶೇಖರ್, ಡಿ.ಆರ್.ಪ್ರಸನ್ನ, ವಿದ್ಯಾರ್ಥಿ ಫರ್ವಿನ್ ಖಾನ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>