ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನಕ್ಕೆ ಸ್ಥಳ ಮಂಜೂರಿಗೆ ಒತ್ತಾಯ

Last Updated 1 ಅಕ್ಟೋಬರ್ 2021, 4:25 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲ್‌ ಪುರ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಸಿಕೊಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಶಾಸಕ ವೆಂಕಟರವಣಪ್ಪ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಸುಮಾರು 500 ಮನೆಗಳಿದ್ದು, 2,000ಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಯಾರಾದರೂ ಮೃತಪಟ್ಟರೆ ಜಮೀನು ಇರುವವರು ತಮ್ಮ ಕೃಷಿ ಭೂಮಿಗಳಲ್ಲಿ ಅಂತ್ಯಕ್ರಿಯೆ ನಡೆಸುತ್ತಾರೆ. ಜಮೀನು ಇಲ್ಲದವರು ಎಲ್ಲಿ ಅಂತ್ಯ ಸಂಸ್ಕಾರ ನಡೆಸಬೇಕು ಎಂದು ದಿಕ್ಕುತೋಚದೆ ಅಂತ್ಯಕ್ರಿಯೆ ಮಾಡಲಾಗದೆ ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡರು. ಗ್ರಾಮದ ಸಮೀಪ ಇರುವ ಅರಣ್ಯ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಆಕ್ಷೇಪಿಸುತ್ತಾರೆ. ಮೃತಪಟ್ಟ ವ್ಯಕ್ತಿಯನ್ನೂ ಗೌರವಯುತ ವಾಗಿ ಅಂತ್ರಕ್ರಿಯೆ ಮಾಡದ ಸ್ಥಿತಿ ಗ್ರಾಮದಲ್ಲಿದೆ ಎಂದು ಅಳಲು ತೋಡಿಕೊಂಡರು.

ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸ್ಮಶಾನಕ್ಕೆ ಜಾಗ ನಿಗದಿಪಡಿಸಬೇಕು ಎಂದು ಸೂಚಿಸಿ ಸಮಸ್ಯೆ ಪರಿಹರಿಸಿಕೊಡಬೇಕು ಎಂದು ಒತ್ತಾಯಿಸಿದರು. ಗ್ರಾ.ಪಂ. ಸದಸ್ಯ ಕಾಳ್ಯಾನಾಯ್ಕ, ಉಪಾಧ್ಯಕ್ಷೆ ಸರೋಜಿ ಬಾಯಿ, ಮುಖಂಡ ಡಾಕುನಾಯ್ಕ, ಕೃಷ್ಣಾನಾಯ್ಕ, ರಂಗಾನಾಯ್ಕ, ಶ್ರೀನಿವಾಸನಾಯ್ಕ, ಸುಬ್ರಮಣಿ, ಧರ್ಮಾನಾಯ್ಕ, ಶ್ರೀರಾಮನಾಯ್ಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT