<p><strong>ತುಮಕೂರು: </strong>‘ಭಾರತ ರಕ್ಷಿಸಿ’ ಆಂದೋಲನದ ಅಂಗವಾಗಿ ಸ್ಕೀಮ್ ವರ್ಕರ್ಸ್ ಫೆಡರೇಷನ್ ಆಫ್ ಇಂಡಿಯಾ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ– ಎಐಯುಟಿಯುಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿ ಭಾಗವಹಿಸಿದ್ದರು.</p>.<p>ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಕನಿಷ್ಠ ₹21 ಸಾವಿರ ಮಾಸಿಕ ವೇತನ, ₹10 ಸಾವಿರ ಪಿಂಚಣಿ ಕೊಡಬೇಕು. ನಿವೃತ್ತಿ ಹೊಂದುವ ಕಾರ್ಯಕರ್ತೆಯರಿಗೆ ₹5 ಲಕ್ಷ ನಿವೃತ್ತಿ ಇಡಿಗಂಟು ನೀಡಬೇಕು. ಕೋವಿಡ್ ಸೋಂಕಿಗೆ ಒಳಗಾದ ಕಾರ್ಯಕರ್ತೆಯರಿಗೆ ಉಚಿತ ಚಿಕಿತ್ಸೆ, ಕನಿಷ್ಠ ₹1 ಲಕ್ಷ ಆರೋಗ್ಯ ಸಹಾಯಧನ, ಸಾವಿಗೀಡಾದ ಕುಟುಂಬಕ್ಕೆ ಘೋಷಿತ ₹50 ಲಕ್ಷ ಪರಿಹಾರ ಧನ ತಕ್ಷಣ ನೀಡಬೇಕು ಎಂದು ಆಗ್ರಹಿಸಿದರು.</p>.<p>ಬಿಸಿಯೂಟ ಸಿಬ್ಬಂದಿಗೆ ಕಳೆದ 6 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. ಕಾರ್ಮಿಕ, ರೈತ, ಜನವಿರೋಧಿ ಕೃಷಿ ಕಾನೂನು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂತೆಗೆದುಕೊಳ್ಳಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ಔಷಧಿ ಸಹಿತ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.</p>.<p>ಕೋವಿಡ್ ಮುಂದುವರಿಯುವ ಅವಧಿಯವರೆಗೂ ಪ್ರತಿಯೊಬ್ಬರಿಗೂ 10 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ಕೊಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಿ ಕೋವಿಡೇತರ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು. ಸಾರ್ವಜನಿಕ ಉದ್ದಿಮೆಗಳು, ಸರ್ಕಾರಿ, ಅರೆ ಸರ್ಕಾರಿ, ನಿಗಮ, ಮಂಡಳಿ, ಕಂಪನಿ, ಕಾರ್ಪೊರೇಷನ್ ಇತರ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು. ಗುತ್ತಿಗೆ, ಹೊರಗುತ್ತಿಗೆ ದುಡಿಮೆ ನಿಷೇಧಿಸಬೇಕು. ಎಲ್ಲಾ ಕಾರ್ಮಿಕರು, ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಜಿಲ್ಲಾ ಸಂಚಾಲಕಿ ಮಂಜುಳ ಗೋನವಾರ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಭಾರತ ರಕ್ಷಿಸಿ’ ಆಂದೋಲನದ ಅಂಗವಾಗಿ ಸ್ಕೀಮ್ ವರ್ಕರ್ಸ್ ಫೆಡರೇಷನ್ ಆಫ್ ಇಂಡಿಯಾ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ– ಎಐಯುಟಿಯುಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿ ಭಾಗವಹಿಸಿದ್ದರು.</p>.<p>ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಕನಿಷ್ಠ ₹21 ಸಾವಿರ ಮಾಸಿಕ ವೇತನ, ₹10 ಸಾವಿರ ಪಿಂಚಣಿ ಕೊಡಬೇಕು. ನಿವೃತ್ತಿ ಹೊಂದುವ ಕಾರ್ಯಕರ್ತೆಯರಿಗೆ ₹5 ಲಕ್ಷ ನಿವೃತ್ತಿ ಇಡಿಗಂಟು ನೀಡಬೇಕು. ಕೋವಿಡ್ ಸೋಂಕಿಗೆ ಒಳಗಾದ ಕಾರ್ಯಕರ್ತೆಯರಿಗೆ ಉಚಿತ ಚಿಕಿತ್ಸೆ, ಕನಿಷ್ಠ ₹1 ಲಕ್ಷ ಆರೋಗ್ಯ ಸಹಾಯಧನ, ಸಾವಿಗೀಡಾದ ಕುಟುಂಬಕ್ಕೆ ಘೋಷಿತ ₹50 ಲಕ್ಷ ಪರಿಹಾರ ಧನ ತಕ್ಷಣ ನೀಡಬೇಕು ಎಂದು ಆಗ್ರಹಿಸಿದರು.</p>.<p>ಬಿಸಿಯೂಟ ಸಿಬ್ಬಂದಿಗೆ ಕಳೆದ 6 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. ಕಾರ್ಮಿಕ, ರೈತ, ಜನವಿರೋಧಿ ಕೃಷಿ ಕಾನೂನು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂತೆಗೆದುಕೊಳ್ಳಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ಔಷಧಿ ಸಹಿತ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.</p>.<p>ಕೋವಿಡ್ ಮುಂದುವರಿಯುವ ಅವಧಿಯವರೆಗೂ ಪ್ರತಿಯೊಬ್ಬರಿಗೂ 10 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ಕೊಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಿ ಕೋವಿಡೇತರ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು. ಸಾರ್ವಜನಿಕ ಉದ್ದಿಮೆಗಳು, ಸರ್ಕಾರಿ, ಅರೆ ಸರ್ಕಾರಿ, ನಿಗಮ, ಮಂಡಳಿ, ಕಂಪನಿ, ಕಾರ್ಪೊರೇಷನ್ ಇತರ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು. ಗುತ್ತಿಗೆ, ಹೊರಗುತ್ತಿಗೆ ದುಡಿಮೆ ನಿಷೇಧಿಸಬೇಕು. ಎಲ್ಲಾ ಕಾರ್ಮಿಕರು, ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಜಿಲ್ಲಾ ಸಂಚಾಲಕಿ ಮಂಜುಳ ಗೋನವಾರ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>