ಕೋವಿಡ್ ಮುಂದುವರಿಯುವ ಅವಧಿಯವರೆಗೂ ಪ್ರತಿಯೊಬ್ಬರಿಗೂ 10 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ಕೊಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಿ ಕೋವಿಡೇತರ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು. ಸಾರ್ವಜನಿಕ ಉದ್ದಿಮೆಗಳು, ಸರ್ಕಾರಿ, ಅರೆ ಸರ್ಕಾರಿ, ನಿಗಮ, ಮಂಡಳಿ, ಕಂಪನಿ, ಕಾರ್ಪೊರೇಷನ್ ಇತರ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು. ಗುತ್ತಿಗೆ, ಹೊರಗುತ್ತಿಗೆ ದುಡಿಮೆ ನಿಷೇಧಿಸಬೇಕು. ಎಲ್ಲಾ ಕಾರ್ಮಿಕರು, ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಜಿಲ್ಲಾ ಸಂಚಾಲಕಿ ಮಂಜುಳ ಗೋನವಾರ ಆಗ್ರಹಿಸಿದರು.