<p><strong>ಪಾವಗಡ</strong>: ತಾಲ್ಲೂಕಿನ ಬ್ಯಾಡನೂರು ಕೆರೆ ಸೇರಿದಂತೆ ವಿವಿಧ ಕೆರೆಗಳ ಮೀನುಗಾರಿಕೆಗೆ ಹೊಸದಾಗಿ ಟೆಂಡರ್ ಕರೆಯಬೇಕು ಎಂದು ಆಗ್ರಹಿಸಿ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು.</p>.<p>ಬ್ಯಾಡನೂರು ಶಂಕರಲಿಂಗನ ಕೆರೆಯಲ್ಲಿ ಮೀನುಗಾರಿಕೆ ನಡೆಸಲು 2014ರಿಂದ ಇಲ್ಲಿಯವರೆಗೆ ಒಬ್ಬರಿಗೆ ನೀಡಲಾಗಿದೆ. ಕಳೆದ ಬಾರಿ ಕೋವಿಡ್ ಇದ್ದುದರಿಂದ ನಷ್ಟವಾಗಿದೆ ಎಂಬ ಕಾರಣ ನೀಡಿ ಈ ವರ್ಷಕ್ಕೂ ಅದೇ ವ್ಯಕ್ತಿಗೆ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿತ್ತು. ಇದರಿಂದ ರೈತರಿಗೆ ಸುತ್ತಮುತ್ತಲ ಗ್ರಾಮಸ್ಥರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.</p>.<p>ಸರ್ಕಾರ ಮೀನುಗಾರಿಕೆ ನಡೆಸುವವರಿಗೆ ನೀಡಿರುವ ಮೀನಿನ ಬಲೆ, ಸಾಕಾಣಿಕೆ ಮಾಡಲು ಮೀನಿನ ಮರಿಗಳು ಇತ್ಯಾದಿ ಸಾಮಗ್ರಿಗಳನ್ನು ರೈತರಿಗೆ ಸಮರ್ಪಕವಾಗಿ ವಿತರಿಸುತ್ತಿಲ್ಲ. ಸೌಲಭ್ಯಗಳ ಬಗ್ಗೆ ಪ್ರಕಟಣಾ ಫಲಕದಲ್ಲಿ ಪ್ರಕಟಿಸುತ್ತಿಲ್ಲ. ಇದರಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.</p>.<p>ಜೂನ್ ತಿಂಗಳಲ್ಲಿ ಅವಧಿ ಮುಗಿಯಲಿದ್ದು, ಕೂಡಲೇ ಹೊಸದಾಗಿ ಹರಾಜು ಪ್ರಕ್ರಿಯೆ ನಡೆಸಬೇಕು. ಮೀನುಗಾರಿಕೆ ಇಲಾಖೆ ಕಚೇರಿ ಮುಂಭಾಗದಲ್ಲಿ ಸೌಕರ್ಯಗಳ ಬಗ್ಗೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.</p>.<p>ಹರಾಜು ಕರೆಯದಿದ್ದಲ್ಲಿ ಸುತ್ತಮುತ್ತಲ ಗ್ರಾಮಗಳ ಜನರೊಂದಿಗೆ ಕೆರೆಯಲ್ಲಿ ಇಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಕೆ.ಆರ್.ನಾಗರಾಜು ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಈರಣ್ಣ, ನರಸಪ್ಪ, ರಂಗನಾಥ್, ಗುರು, ರಂಗಧಾಮ, ಸದಾಶಿವಪ್ಪ, ಅನ್ನಪೂರ್ಣಮ್ಮ, ಶಿವರಾಜು, ಮೋಹನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ತಾಲ್ಲೂಕಿನ ಬ್ಯಾಡನೂರು ಕೆರೆ ಸೇರಿದಂತೆ ವಿವಿಧ ಕೆರೆಗಳ ಮೀನುಗಾರಿಕೆಗೆ ಹೊಸದಾಗಿ ಟೆಂಡರ್ ಕರೆಯಬೇಕು ಎಂದು ಆಗ್ರಹಿಸಿ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು.</p>.<p>ಬ್ಯಾಡನೂರು ಶಂಕರಲಿಂಗನ ಕೆರೆಯಲ್ಲಿ ಮೀನುಗಾರಿಕೆ ನಡೆಸಲು 2014ರಿಂದ ಇಲ್ಲಿಯವರೆಗೆ ಒಬ್ಬರಿಗೆ ನೀಡಲಾಗಿದೆ. ಕಳೆದ ಬಾರಿ ಕೋವಿಡ್ ಇದ್ದುದರಿಂದ ನಷ್ಟವಾಗಿದೆ ಎಂಬ ಕಾರಣ ನೀಡಿ ಈ ವರ್ಷಕ್ಕೂ ಅದೇ ವ್ಯಕ್ತಿಗೆ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿತ್ತು. ಇದರಿಂದ ರೈತರಿಗೆ ಸುತ್ತಮುತ್ತಲ ಗ್ರಾಮಸ್ಥರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.</p>.<p>ಸರ್ಕಾರ ಮೀನುಗಾರಿಕೆ ನಡೆಸುವವರಿಗೆ ನೀಡಿರುವ ಮೀನಿನ ಬಲೆ, ಸಾಕಾಣಿಕೆ ಮಾಡಲು ಮೀನಿನ ಮರಿಗಳು ಇತ್ಯಾದಿ ಸಾಮಗ್ರಿಗಳನ್ನು ರೈತರಿಗೆ ಸಮರ್ಪಕವಾಗಿ ವಿತರಿಸುತ್ತಿಲ್ಲ. ಸೌಲಭ್ಯಗಳ ಬಗ್ಗೆ ಪ್ರಕಟಣಾ ಫಲಕದಲ್ಲಿ ಪ್ರಕಟಿಸುತ್ತಿಲ್ಲ. ಇದರಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.</p>.<p>ಜೂನ್ ತಿಂಗಳಲ್ಲಿ ಅವಧಿ ಮುಗಿಯಲಿದ್ದು, ಕೂಡಲೇ ಹೊಸದಾಗಿ ಹರಾಜು ಪ್ರಕ್ರಿಯೆ ನಡೆಸಬೇಕು. ಮೀನುಗಾರಿಕೆ ಇಲಾಖೆ ಕಚೇರಿ ಮುಂಭಾಗದಲ್ಲಿ ಸೌಕರ್ಯಗಳ ಬಗ್ಗೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.</p>.<p>ಹರಾಜು ಕರೆಯದಿದ್ದಲ್ಲಿ ಸುತ್ತಮುತ್ತಲ ಗ್ರಾಮಗಳ ಜನರೊಂದಿಗೆ ಕೆರೆಯಲ್ಲಿ ಇಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಕೆ.ಆರ್.ನಾಗರಾಜು ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಈರಣ್ಣ, ನರಸಪ್ಪ, ರಂಗನಾಥ್, ಗುರು, ರಂಗಧಾಮ, ಸದಾಶಿವಪ್ಪ, ಅನ್ನಪೂರ್ಣಮ್ಮ, ಶಿವರಾಜು, ಮೋಹನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>