ಮಧುಗಿರಿ: ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ನಾಮಫಲಕ ತೆಗೆದು ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಕನ್ನಡ ಜಾಗೃತಿ ವೇದಿಕೆ ಪದಾಧಿಕಾರಿಗಳು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ರೇವಣಸಿದ್ದಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ತಾಲ್ಲೂಕು ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿಡಿಪಿಐ ರೇವಣಸಿದ್ದಪ್ಪ, ಇಂಗ್ಲಿಷ್ ನಾಮಫಲಕ ಹಾಕಿದ ಶಾಲೆಗಳಿಗೆ ನೋಟಿಸ್ ನೀಡಲಾಗುವುದು ಎಂದರು.
ಕನ್ನಡ ಜಾಗೃತಿ ವೇದಿಕೆ ಸಂಘಟನೆ ಕಾರ್ಯದರ್ಶಿ ಶಿವಲಿಂಗಪ್ಪ, ನಗರ ಕಾರ್ಯದರ್ಶಿ ರೋಹಿತ್, ಕೊಡಿಗೇನಹಳ್ಳಿ ಹೋಬಳಿ ಅಧ್ಯಕ್ಷ ರಾಜು, ನರಸಿಂಹಮೂರ್ತಿ, ನಾಗರಾಜ್, ಚೌಡಪ್ಪ ಹಾಜರಿದ್ದರು.