ಪಠ್ಯದಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರ ವಿಚಾರ ತಿಳಿಸಬೇಕೆ ಹೊರೆತು ಅನಗತ್ಯ ಚಿಂತನೆ ತುಂಬಬಾರದು. 12ನೇ ಶತಮಾನದ ಬಸವಣ್ಣ, ಮಹಾತ್ಮ ಗಾಂಧೀಜಿ, ಡಿವಿಜಿ, ಕುವೆಂಪು ಅಂತಹವರ ಚಿಂತನೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮಾಜಿ ಸಚಿವ ಬಿ.ಸಿ ನಾಗೇಶ್ ‘ರಂಭಾಪುರಿ ಬೆಳಗು’ ಬಿಡುಗಡೆ ಮಾಡಿ ಮಾತನಾಡಿ, ಮನುಷ್ಯ ಮನುಷ್ಯತ್ವ ಕಳೆದುಕೊಂಡಾಗ ಹೀನ ಕೃತ್ಯಕ್ಕೆ ಮುಂದಾಗುತ್ತಾನೆ. ಸಂಸ್ಕೃತಿ, ಸಂಸ್ಕಾರ, ಮಾನವೀಯ ಮೌಲ್ಯ ಕಳೆದುಕೊಳ್ಳುತ್ತಿದ್ದಾನೆ. ಧರ್ಮ ಜಾಗೃತಿ ಸಭೆಗಳಿಂದ ಮಾನವೀಯ ಗುಣ ಬೆಳೆಸಿಕೊಳ್ಳಲು ಸಹಕಾರಿ ಎಂದರು.