<p><strong>ತುಮಕೂರು:</strong> ಕೋವಿಡ್ ಲಾಕ್ಡೌನ್ನಿಂದ ಅಸಂಘಟಿತ ವಲಯದ ಕಾರ್ಮಿಕರು ಸಂಕಷ್ಟ ಪರಿಸ್ಥಿತಿಯಲ್ಲಿದ್ದು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಪ್ಯಾಕೇಜ್ ವಂಚನೆಯಾಗದಂತೆ ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ, ಕಾರ್ಮಿಕ ಮುಖಂಡರು, ಅಸಂಘಟಿತ ಕಾರ್ಮಿಕ ಮುಖಂಡರ ಜತೆ ಜೂಮ್ ಸಭೆ ನಡೆಸಿದರು.</p>.<p>‘ಉದ್ಯೋಗ ಪ್ರಮಾಣ ಪತ್ರ ನೀಡುವಲ್ಲಿ ಇಲಾಖೆಗಳು ಸಹಕರಿಸುತ್ತಿಲ್ಲ. ಈ ಗೊಂದಲ<br />ಪರಿಹಾರ ಮಾಡಬೇಕು’ ಎಂಬ ಕಾರ್ಮಿಕ ಮುಖಂಡರ ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ‘ಹಿಂದೆ ಕೋವಿಡ್ ಪರಿಹಾರ ಪಡೆಯುವಾಗ ಸಂಬಂಧಿಸಿದ ಇಲಾಖೆಗಳು ನೀಡಿದ್ದ ಉದ್ಯೋಗ ಪ್ರಮಾಣ ಪತ್ರವನ್ನು ಈ ಬಾರಿಯೂ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಫಲಾನುಭವಿಗಳು, ಕಾರ್ಮಿಕ ಮುಖಂಡರು ಸಹಾಯ ಕೋರಿ ಬಂದಾಗ ಕೂಡಲೇ ಸ್ಪಂದಿಸಬೇಕು’ ಎಂದು ಹೇಳಿದರು.</p>.<p>ಕಾರ್ಮಿಕರಿಗೆ ನಾಗರಿಕ ಸೇವಾ ಕೇಂದ್ರಗಳಲ್ಲಿ ಪ್ರಮಾಣ ಪತ್ರಗಳನ್ನು ನೀಡುವಾಗ ನಿಗದಿತ ಸೇವಾ ಶುಲ್ಕ ಮಾತ್ರ ಪಡೆಯಬೇಕು. ದುಪ್ಪಟ್ಟು ಹಣ ಪಡೆಯುವವರ ವಿರುದ್ಧ ಕಟ್ಟುನಿಟ್ಟು ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.</p>.<p>ಜಿಲ್ಲಾ ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶುಭಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬಿರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೋವಿಡ್ ಲಾಕ್ಡೌನ್ನಿಂದ ಅಸಂಘಟಿತ ವಲಯದ ಕಾರ್ಮಿಕರು ಸಂಕಷ್ಟ ಪರಿಸ್ಥಿತಿಯಲ್ಲಿದ್ದು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಪ್ಯಾಕೇಜ್ ವಂಚನೆಯಾಗದಂತೆ ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ, ಕಾರ್ಮಿಕ ಮುಖಂಡರು, ಅಸಂಘಟಿತ ಕಾರ್ಮಿಕ ಮುಖಂಡರ ಜತೆ ಜೂಮ್ ಸಭೆ ನಡೆಸಿದರು.</p>.<p>‘ಉದ್ಯೋಗ ಪ್ರಮಾಣ ಪತ್ರ ನೀಡುವಲ್ಲಿ ಇಲಾಖೆಗಳು ಸಹಕರಿಸುತ್ತಿಲ್ಲ. ಈ ಗೊಂದಲ<br />ಪರಿಹಾರ ಮಾಡಬೇಕು’ ಎಂಬ ಕಾರ್ಮಿಕ ಮುಖಂಡರ ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ‘ಹಿಂದೆ ಕೋವಿಡ್ ಪರಿಹಾರ ಪಡೆಯುವಾಗ ಸಂಬಂಧಿಸಿದ ಇಲಾಖೆಗಳು ನೀಡಿದ್ದ ಉದ್ಯೋಗ ಪ್ರಮಾಣ ಪತ್ರವನ್ನು ಈ ಬಾರಿಯೂ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಫಲಾನುಭವಿಗಳು, ಕಾರ್ಮಿಕ ಮುಖಂಡರು ಸಹಾಯ ಕೋರಿ ಬಂದಾಗ ಕೂಡಲೇ ಸ್ಪಂದಿಸಬೇಕು’ ಎಂದು ಹೇಳಿದರು.</p>.<p>ಕಾರ್ಮಿಕರಿಗೆ ನಾಗರಿಕ ಸೇವಾ ಕೇಂದ್ರಗಳಲ್ಲಿ ಪ್ರಮಾಣ ಪತ್ರಗಳನ್ನು ನೀಡುವಾಗ ನಿಗದಿತ ಸೇವಾ ಶುಲ್ಕ ಮಾತ್ರ ಪಡೆಯಬೇಕು. ದುಪ್ಪಟ್ಟು ಹಣ ಪಡೆಯುವವರ ವಿರುದ್ಧ ಕಟ್ಟುನಿಟ್ಟು ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.</p>.<p>ಜಿಲ್ಲಾ ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶುಭಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬಿರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>