<p><strong>ತುಮಕೂರು: </strong>ರೈತರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿರುವ ಶ್ರೀಗಂಧ, ಬಿದಿರು ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಸಾಲ ಸೌಲಭ್ಯ, ವಿಮೆ ಕಲ್ಪಿಸಬೇಕು ಎಂದು ಶ್ರೀಗಂಧ ಬೆಳೆಗಾರರ ಮತ್ತು ಬಳಕೆದಾರರ ಅಭಿವೃದ್ಧಿ ಸಂಶೋಧನಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಆರ್.ರಘುರಾಮ್ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶ್ರೀಗಂಧ, ಬಿದಿರು ಬೆಳೆಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಕೇಂದ್ರ, ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ತುಮಕೂರು– ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ಅನ್ನು ಚತುಷ್ಪಥವನ್ನಾಗಿ ಪರಿವರ್ತಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಭಾಗದಲ್ಲಿ 27 ರೈತರ ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಜಮೀನುಗಳಲ್ಲಿದ್ದ ಶ್ರೀಗಂಧದ ಮರಗಳಿಗೆ ಒಟ್ಟು ₹ 62 ಕೋಟಿ ನಿಗದಿಗೊಳಿಸಲಾಗಿದೆ. ಅರಣ್ಯ ಇಲಾಖೆಯು ಒಂದು ಮರಕ್ಕೆ ₹ 2,44,620 ಪರಿಹಾರ ನಿಗದಿಪಡಿಸಿದೆ ಎಂದರು.</p>.<p>ಆದರೆ ಒಂದು ಶ್ರೀಗಂಧದ ಗಿಡಕ್ಕೆ ₹ 283 ನಿಗದಿಪಡಿಸಲಾಗಿದೆ. ಈ ಆದೇಶವನ್ನು ಅರಣ್ಯ ಇಲಾಖೆಯವರು ಖಾತೆದಾರರಿಗೆ ತಲುಪಿಸಿರುತ್ತಾರೆ ಎಂದು ಹೇಳಿದರು.</p>.<p>ಈ ವಿಚಾರ ನಮ್ಮ ಸಂಘದ ಗಮನಕ್ಕೆ ಬಂತು. ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದೆವು. ಈ ವಿಚಾರವಾಗಿ ಅ. 1ರಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ 20 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು ಎಂದರು.</p>.<p>ಕೊಟ್ಟ ಮಾತಿನಂತೆ ಪ್ರತಿ ಮರಕ್ಕೆ ₹ 2,44,620 ಪರಿಹಾರ ನೀಡಬೇಕು. ಕೇವಲ ₹ 283 ಕೊಡುವುದು ಸರಿಯಲ್ಲ. ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ ಶ್ರೀಗಂಧಕ್ಕೆ ₹ 65 ಸಾವಿರದಿಂದ 1.50 ಲಕ್ಷ ಬೆಲೆ ಸಿಗುತ್ತಿದೆ. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಹನುಮಂತರಾಯಪ್ಪ, ವಕೀಲ ಸದಾಶಿವಯ್ಯ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ರೈತರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿರುವ ಶ್ರೀಗಂಧ, ಬಿದಿರು ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಸಾಲ ಸೌಲಭ್ಯ, ವಿಮೆ ಕಲ್ಪಿಸಬೇಕು ಎಂದು ಶ್ರೀಗಂಧ ಬೆಳೆಗಾರರ ಮತ್ತು ಬಳಕೆದಾರರ ಅಭಿವೃದ್ಧಿ ಸಂಶೋಧನಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಆರ್.ರಘುರಾಮ್ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶ್ರೀಗಂಧ, ಬಿದಿರು ಬೆಳೆಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಕೇಂದ್ರ, ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ತುಮಕೂರು– ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ಅನ್ನು ಚತುಷ್ಪಥವನ್ನಾಗಿ ಪರಿವರ್ತಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಭಾಗದಲ್ಲಿ 27 ರೈತರ ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಜಮೀನುಗಳಲ್ಲಿದ್ದ ಶ್ರೀಗಂಧದ ಮರಗಳಿಗೆ ಒಟ್ಟು ₹ 62 ಕೋಟಿ ನಿಗದಿಗೊಳಿಸಲಾಗಿದೆ. ಅರಣ್ಯ ಇಲಾಖೆಯು ಒಂದು ಮರಕ್ಕೆ ₹ 2,44,620 ಪರಿಹಾರ ನಿಗದಿಪಡಿಸಿದೆ ಎಂದರು.</p>.<p>ಆದರೆ ಒಂದು ಶ್ರೀಗಂಧದ ಗಿಡಕ್ಕೆ ₹ 283 ನಿಗದಿಪಡಿಸಲಾಗಿದೆ. ಈ ಆದೇಶವನ್ನು ಅರಣ್ಯ ಇಲಾಖೆಯವರು ಖಾತೆದಾರರಿಗೆ ತಲುಪಿಸಿರುತ್ತಾರೆ ಎಂದು ಹೇಳಿದರು.</p>.<p>ಈ ವಿಚಾರ ನಮ್ಮ ಸಂಘದ ಗಮನಕ್ಕೆ ಬಂತು. ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದೆವು. ಈ ವಿಚಾರವಾಗಿ ಅ. 1ರಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ 20 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು ಎಂದರು.</p>.<p>ಕೊಟ್ಟ ಮಾತಿನಂತೆ ಪ್ರತಿ ಮರಕ್ಕೆ ₹ 2,44,620 ಪರಿಹಾರ ನೀಡಬೇಕು. ಕೇವಲ ₹ 283 ಕೊಡುವುದು ಸರಿಯಲ್ಲ. ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ ಶ್ರೀಗಂಧಕ್ಕೆ ₹ 65 ಸಾವಿರದಿಂದ 1.50 ಲಕ್ಷ ಬೆಲೆ ಸಿಗುತ್ತಿದೆ. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಹನುಮಂತರಾಯಪ್ಪ, ವಕೀಲ ಸದಾಶಿವಯ್ಯ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>