<p><strong>ತುರುವೇಕೆರೆ:</strong> ತುಮಕೂರು ಜಿಲ್ಲೆಯಲ್ಲೇ ಸುಮಾರು 2 ಲಕ್ಷ ರಾಸುಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲಾಗಿದ್ದು ಇದರಿಂದ ಹೈನುಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಹೇಳಿದರು.</p>.<p>ತಾಲ್ಲೂಕಿನ ಮಾದಿಹಳ್ಳಿಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಂಭಾಗ ಹಮ್ಮಿಕೊಂಡಿದ್ದ ರಾಸುಗಳಿಗೆ ವಿಮೆ ಮಾಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ರಾಸುಗಳ ವಿಮೆ ಮಾಡಿಸುವ ಸಲುವಾಗಿ ಹಾಲು ಒಕ್ಕೂಟದಿಂದ ಸುಮಾರು ₹24 ಕೋಟಿ ಮೀಸಲಿರಿಸಲಾಗಿದೆ. ಪ್ರತಿ ರಾಸುವಿಗೆ ಕನಿಷ್ಠ ₹10 ಸಾವಿರದಿಂದ ₹60 ಸಾವಿರ ವಿಮೆ ಮಾಡಿಸಲಾಗುತ್ತಿದೆ. ಸರಾಸರಿ ₹40 ಸಾವಿರ ವಿಮೆ ಸೌಲಭ್ಯವಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಕಳೆದ ಬಾರಿ 13 ಸಾವಿರ ರಾಸುಗಳಿಗೆ ವಿಮೆ ಮಾಡಿಸಲಾಗಿತ್ತು. ಆದರೆ ಈ ಬಾರಿ 20 ಸಾವಿರ ರಾಸುಗಳಿಗೆ ವಿಮೆ ಮಾಡಿಸುವ ಗುರಿ ಹೊಂದಲಾಗಿದೆ. ವಿಮೆ ಹಣವನ್ನು ರೈತರಿಗೆ ಸಂಸ್ಥೆಯಿಂದಲೇ ಮಾಡಿಸಲಾಗುವುದು. ಸರಾಸರಿ ಪ್ರತಿ ರಾಸುವಿಗೆ ₹1,800 ವಿಮೆ ಹಣ ಕಟ್ಟಬೇಕಾಗುತ್ತದೆ. ಆ ಎಲ್ಲಾ ಹಣವನ್ನು ಹಾಲಿನ ಒಕ್ಕೂಟ, ಟ್ರಸ್ಟ್ ಮತ್ತು ಹಾಲು ಸಹಕಾರ ಸಂಘದ ಮೂಲಕ ಕಟ್ಟಲಾಗುವುದು ಎಂದರು.</p>.<p>ವಿಸ್ತರಣಾಧಿಕಾರಿ ಮಂಜುನಾಥ್, ದಿವಾಕರ್, ಶೋಭಾ, ಗೌರಮ್ಮ, ಸುಶೀಲಮ್ಮ, ನೀಲಮ್ಮ, ಕವಿತಾ, ಮಹಾಲಕ್ಷ್ಮಮ್ಮ, ಕೆಂಪದೇವಮ್ಮ, ಕಲಾವತಿ, ರೂಪಶ್ರೀ, ರತ್ನಮ್ಮ, ಜ್ಯೋತಿ, ಕುಮಾರ್, ವಿಶಾಲಾಕ್ಷಿ, ನರೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತುಮಕೂರು ಜಿಲ್ಲೆಯಲ್ಲೇ ಸುಮಾರು 2 ಲಕ್ಷ ರಾಸುಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲಾಗಿದ್ದು ಇದರಿಂದ ಹೈನುಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಹೇಳಿದರು.</p>.<p>ತಾಲ್ಲೂಕಿನ ಮಾದಿಹಳ್ಳಿಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಂಭಾಗ ಹಮ್ಮಿಕೊಂಡಿದ್ದ ರಾಸುಗಳಿಗೆ ವಿಮೆ ಮಾಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ರಾಸುಗಳ ವಿಮೆ ಮಾಡಿಸುವ ಸಲುವಾಗಿ ಹಾಲು ಒಕ್ಕೂಟದಿಂದ ಸುಮಾರು ₹24 ಕೋಟಿ ಮೀಸಲಿರಿಸಲಾಗಿದೆ. ಪ್ರತಿ ರಾಸುವಿಗೆ ಕನಿಷ್ಠ ₹10 ಸಾವಿರದಿಂದ ₹60 ಸಾವಿರ ವಿಮೆ ಮಾಡಿಸಲಾಗುತ್ತಿದೆ. ಸರಾಸರಿ ₹40 ಸಾವಿರ ವಿಮೆ ಸೌಲಭ್ಯವಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಕಳೆದ ಬಾರಿ 13 ಸಾವಿರ ರಾಸುಗಳಿಗೆ ವಿಮೆ ಮಾಡಿಸಲಾಗಿತ್ತು. ಆದರೆ ಈ ಬಾರಿ 20 ಸಾವಿರ ರಾಸುಗಳಿಗೆ ವಿಮೆ ಮಾಡಿಸುವ ಗುರಿ ಹೊಂದಲಾಗಿದೆ. ವಿಮೆ ಹಣವನ್ನು ರೈತರಿಗೆ ಸಂಸ್ಥೆಯಿಂದಲೇ ಮಾಡಿಸಲಾಗುವುದು. ಸರಾಸರಿ ಪ್ರತಿ ರಾಸುವಿಗೆ ₹1,800 ವಿಮೆ ಹಣ ಕಟ್ಟಬೇಕಾಗುತ್ತದೆ. ಆ ಎಲ್ಲಾ ಹಣವನ್ನು ಹಾಲಿನ ಒಕ್ಕೂಟ, ಟ್ರಸ್ಟ್ ಮತ್ತು ಹಾಲು ಸಹಕಾರ ಸಂಘದ ಮೂಲಕ ಕಟ್ಟಲಾಗುವುದು ಎಂದರು.</p>.<p>ವಿಸ್ತರಣಾಧಿಕಾರಿ ಮಂಜುನಾಥ್, ದಿವಾಕರ್, ಶೋಭಾ, ಗೌರಮ್ಮ, ಸುಶೀಲಮ್ಮ, ನೀಲಮ್ಮ, ಕವಿತಾ, ಮಹಾಲಕ್ಷ್ಮಮ್ಮ, ಕೆಂಪದೇವಮ್ಮ, ಕಲಾವತಿ, ರೂಪಶ್ರೀ, ರತ್ನಮ್ಮ, ಜ್ಯೋತಿ, ಕುಮಾರ್, ವಿಶಾಲಾಕ್ಷಿ, ನರೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>