<p><strong>ತುಮಕೂರು</strong>: ವಿಶ್ವವಿದ್ಯಾಲಯ ಕಲಾ ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ಹಮ್ಮಿಕೊಂಡಿರುವ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಮಂಗಳವಾರ ವಿ.ವಿಯಲ್ಲಿ ಆರಂಭವಾಯಿತು.</p>.<p>ಮಾರ್ಚ್ 17ರ ವರೆಗೂ ನಡೆಯುವ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಿದ್ದು, ಪ್ರಥಮ, ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಪ್ರಶಸ್ತಿ, ಪದಕ, ಪ್ರಮಾಣಪತ್ರ ನೀಡಲಾಗುತ್ತದೆ.</p>.<p>ಪಂದ್ಯಾವಳಿಗೆ ಚಾಲನೆ ನೀಡಿದ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನ ಕುಮಾರ್ ಮಾತನಾಡಿ, ‘ಕ್ರೀಡೆ ಎಲ್ಲರನ್ನೂ ಒಗ್ಗೂಡಿಸುತ್ತದೆ. ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ವಿಚಾರಗಳಿಗೆ ಪರಿಹಾರದ ರೂಪದಲ್ಲಿ ಕ್ರೀಡೆ ಕಾರ್ಯ ನಿರ್ವಹಿಸಲಿದೆ. ಶ್ರದ್ಧೆ, ಶಿಸ್ತು, ಪ್ರಾಮಾಣಿಕತೆ ಪ್ರದರ್ಶಿಸಿದಾಗ ಕ್ರೀಡೆ ಯಶಸ್ವಿಯಾಗುತ್ತದೆ’ ಎಂದು ಹೇಳಿದರು.</p>.<p>ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ, ‘ದೈಹಿಕ, ಮಾನಸಿಕ ಚಟುವಟಿಕೆ ಸಮತೋಲನದಿಂದ ಇದ್ದಾಗ ಕ್ರೀಡಾಪಟು ಯಶಸ್ವಿಯಾಗುತ್ತಾನೆ. ಹೊಸ ಶಿಕ್ಷಣ ನೀತಿಯಲ್ಲಿ ಕ್ರೀಡೆಗೆ ಪ್ರಾಶಸ್ತ್ಯ ನೀಡಲಾಗಿದೆ’ ಎಂದರು.</p>.<p>ವಿ.ವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎ.ಎಂ.ಮಂಜುನಾಥ್, ಕಲಾ ಕಾಲೇಜು ದೈಹಿಕ ಶಿಕ್ಷಣ ವಿಭಾಗದ ಸಂಚಾಲಕ ಡಾ.ಆರ್.ಸುದೀಪ್ ಕುಮಾರ್, ಪ್ರಾಧ್ಯಾಪಕರಾದ ಟಿ.ಎನ್.ಹರಿಪ್ರಸಾದ್, ಕೆ.ರಾಮಚಂದ್ರಪ್ಪ, ಜಿ.ದಾಕ್ಷಾಯಿಣಿ, ಸಹಾಯಕ ಗ್ರಂಥ ಪಾಲಕಿ ಡಾ.ಎಸ್.ಸುಮಾದೇವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವಿಶ್ವವಿದ್ಯಾಲಯ ಕಲಾ ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ಹಮ್ಮಿಕೊಂಡಿರುವ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಮಂಗಳವಾರ ವಿ.ವಿಯಲ್ಲಿ ಆರಂಭವಾಯಿತು.</p>.<p>ಮಾರ್ಚ್ 17ರ ವರೆಗೂ ನಡೆಯುವ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಿದ್ದು, ಪ್ರಥಮ, ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಪ್ರಶಸ್ತಿ, ಪದಕ, ಪ್ರಮಾಣಪತ್ರ ನೀಡಲಾಗುತ್ತದೆ.</p>.<p>ಪಂದ್ಯಾವಳಿಗೆ ಚಾಲನೆ ನೀಡಿದ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನ ಕುಮಾರ್ ಮಾತನಾಡಿ, ‘ಕ್ರೀಡೆ ಎಲ್ಲರನ್ನೂ ಒಗ್ಗೂಡಿಸುತ್ತದೆ. ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ವಿಚಾರಗಳಿಗೆ ಪರಿಹಾರದ ರೂಪದಲ್ಲಿ ಕ್ರೀಡೆ ಕಾರ್ಯ ನಿರ್ವಹಿಸಲಿದೆ. ಶ್ರದ್ಧೆ, ಶಿಸ್ತು, ಪ್ರಾಮಾಣಿಕತೆ ಪ್ರದರ್ಶಿಸಿದಾಗ ಕ್ರೀಡೆ ಯಶಸ್ವಿಯಾಗುತ್ತದೆ’ ಎಂದು ಹೇಳಿದರು.</p>.<p>ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ, ‘ದೈಹಿಕ, ಮಾನಸಿಕ ಚಟುವಟಿಕೆ ಸಮತೋಲನದಿಂದ ಇದ್ದಾಗ ಕ್ರೀಡಾಪಟು ಯಶಸ್ವಿಯಾಗುತ್ತಾನೆ. ಹೊಸ ಶಿಕ್ಷಣ ನೀತಿಯಲ್ಲಿ ಕ್ರೀಡೆಗೆ ಪ್ರಾಶಸ್ತ್ಯ ನೀಡಲಾಗಿದೆ’ ಎಂದರು.</p>.<p>ವಿ.ವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎ.ಎಂ.ಮಂಜುನಾಥ್, ಕಲಾ ಕಾಲೇಜು ದೈಹಿಕ ಶಿಕ್ಷಣ ವಿಭಾಗದ ಸಂಚಾಲಕ ಡಾ.ಆರ್.ಸುದೀಪ್ ಕುಮಾರ್, ಪ್ರಾಧ್ಯಾಪಕರಾದ ಟಿ.ಎನ್.ಹರಿಪ್ರಸಾದ್, ಕೆ.ರಾಮಚಂದ್ರಪ್ಪ, ಜಿ.ದಾಕ್ಷಾಯಿಣಿ, ಸಹಾಯಕ ಗ್ರಂಥ ಪಾಲಕಿ ಡಾ.ಎಸ್.ಸುಮಾದೇವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>