<p><strong>ಗುಬ್ಬಿ:</strong> ರೈತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಹಾಗೂ ಅನುದಾನದ ಜಾಗೃತಿ ಮೂಡಿಸಿ, ರೈತರು ಹಾಗೂ ಅಧಿಕಾರಿಗಳ ನಡುವೆ ಸಮನ್ವಯತೆ ಮೂಡಿಸುವ ಉದ್ದೇಶದಿಂದ ರೈತರೊಂದಿಗೆ ನಾವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.</p>.<p>ನಿಟ್ಟೂರಿನಲ್ಲಿ ಶುಕ್ರವಾರ ನಡೆದ ‘ರೈತರೊಂದಿಗೆ ನಾವು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಅಗತ್ಯವಿರುವ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನು ಸಾಕಾಣಿಕೆ, ಬೆಸ್ಕಾಂ ಹಾಗೂ ಬ್ಯಾಂಕ್ಗಳಲ್ಲಿ ಸಿಗುವ ಸೌಲಭ್ಯದ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು. </p>.<p>ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸ್ಥಳೀಯ ಭಾಷೆ ಗೊತ್ತಿಲ್ಲದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು.</p>.<p>ಮುಖಂಡ ಶಂಕರಾನಂದ್ ಮಾತನಾಡಿ, ಬೆಸ್ಕಾಂ, ಕಂದಾಯ ಹಾಗೂ ಸರ್ವೆ ಇಲಾಖೆಗಳಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ರೈತರು ದೂರುತ್ತಿರುವುದರಿಂದ, ಅಧಿಕಾರಿಗಳು ರೈತರ ಪರ ಕಾರ್ಯನಿರ್ವಹಿಸಲು ಬದ್ಧರಾಗಬೇಕು ಎಂದು ಹೇಳಿದರು.</p>.<p>ಸಾಮಾಜಿಕ ಅರಣ್ಯ, ಕಂದಾಯ, ಪಶುವೈದ್ಯಕೀಯ, ಬೆಸ್ಕಾಂ ಇಲಾಖೆಗಳಿಗೆ ಸಂಬಂಧಿಸಿದಂತೆ ರೈತರ ಜೊತೆ ಸಂವಾದ ನಡೆಸಿ ಜಾಗೃತಿ ಮೂಡಿಸಲಾಯಿತು. ಬೇಸಿಗೆ ಸಮೀಪಿಸುತ್ತಿರುವುದರಿಂದ ವಿದ್ಯುತ್ ಅಭಾವ ಉಂಟಾಗದಂತೆ ತುಂಬಾ ಹಳೆಯದಾಗಿರುವ ವಿದ್ಯುತ್ ತಂತಿ ಬದಲಾಯಿಸಿಕೊಡಬೇಕು ಎಂದು ಸ್ಥಳದಲ್ಲಿದ್ದ ಬೆಸ್ಕಾಂ ಎಇಇ ಅವರನ್ನು ರೈತರು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಮುಖಂಡರಾದ ಜಯಣ್ಣ, ಕೆ.ಆರ್.ತಾತಯ್ಯ, ರೇವಣಸಿದ್ದಪ್ಪ, ಸೌಭಾಗ್ಯಮ್ಮ, ಗುರುರೇಣುಕಾರಾಧ್ಯ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ರೈತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಹಾಗೂ ಅನುದಾನದ ಜಾಗೃತಿ ಮೂಡಿಸಿ, ರೈತರು ಹಾಗೂ ಅಧಿಕಾರಿಗಳ ನಡುವೆ ಸಮನ್ವಯತೆ ಮೂಡಿಸುವ ಉದ್ದೇಶದಿಂದ ರೈತರೊಂದಿಗೆ ನಾವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.</p>.<p>ನಿಟ್ಟೂರಿನಲ್ಲಿ ಶುಕ್ರವಾರ ನಡೆದ ‘ರೈತರೊಂದಿಗೆ ನಾವು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಅಗತ್ಯವಿರುವ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನು ಸಾಕಾಣಿಕೆ, ಬೆಸ್ಕಾಂ ಹಾಗೂ ಬ್ಯಾಂಕ್ಗಳಲ್ಲಿ ಸಿಗುವ ಸೌಲಭ್ಯದ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು. </p>.<p>ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸ್ಥಳೀಯ ಭಾಷೆ ಗೊತ್ತಿಲ್ಲದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು.</p>.<p>ಮುಖಂಡ ಶಂಕರಾನಂದ್ ಮಾತನಾಡಿ, ಬೆಸ್ಕಾಂ, ಕಂದಾಯ ಹಾಗೂ ಸರ್ವೆ ಇಲಾಖೆಗಳಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ರೈತರು ದೂರುತ್ತಿರುವುದರಿಂದ, ಅಧಿಕಾರಿಗಳು ರೈತರ ಪರ ಕಾರ್ಯನಿರ್ವಹಿಸಲು ಬದ್ಧರಾಗಬೇಕು ಎಂದು ಹೇಳಿದರು.</p>.<p>ಸಾಮಾಜಿಕ ಅರಣ್ಯ, ಕಂದಾಯ, ಪಶುವೈದ್ಯಕೀಯ, ಬೆಸ್ಕಾಂ ಇಲಾಖೆಗಳಿಗೆ ಸಂಬಂಧಿಸಿದಂತೆ ರೈತರ ಜೊತೆ ಸಂವಾದ ನಡೆಸಿ ಜಾಗೃತಿ ಮೂಡಿಸಲಾಯಿತು. ಬೇಸಿಗೆ ಸಮೀಪಿಸುತ್ತಿರುವುದರಿಂದ ವಿದ್ಯುತ್ ಅಭಾವ ಉಂಟಾಗದಂತೆ ತುಂಬಾ ಹಳೆಯದಾಗಿರುವ ವಿದ್ಯುತ್ ತಂತಿ ಬದಲಾಯಿಸಿಕೊಡಬೇಕು ಎಂದು ಸ್ಥಳದಲ್ಲಿದ್ದ ಬೆಸ್ಕಾಂ ಎಇಇ ಅವರನ್ನು ರೈತರು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಮುಖಂಡರಾದ ಜಯಣ್ಣ, ಕೆ.ಆರ್.ತಾತಯ್ಯ, ರೇವಣಸಿದ್ದಪ್ಪ, ಸೌಭಾಗ್ಯಮ್ಮ, ಗುರುರೇಣುಕಾರಾಧ್ಯ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>