<p><strong>ತಿಪಟೂರು</strong>: ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ತಾಲ್ಲೂಕು ಜೈಭೀಮ್ ಛಲವಾದಿ ಮಹಾಸಬಾ ಹಾಗೂ ಪ್ರಗತಿಪರ ಸಂಘಗಳ ಮಹಾ ಒಕ್ಕೂಟದಿಂದ ನಗರದ ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಆಡಳಿತಸೌಧದವರೆಗೆ ಬೈಕ್ ರ್ಯಾಲಿ, ಪ್ರತಿಭಟನೆ ನಡೆಸಲಾಯಿತು.</p>.<p>ಛಲವಾದಿ ಮಹಾಸಭಾದ ಅಧ್ಯಕ್ಷ ಬಜಗೂರು ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಒಳ ಮೀಸಲಾತಿ ಕೆಲವರಿಗೆ ವಿಷವಾದರೆ, ಇನ್ನು ಕೆಲವರಿಗೆ ಹಾಲು ನೀಡಿದಂತಾಗಿದೆ. ಈ ಅಸಮಾನತೆ ಅಳಿಸಿ ಸಮಾನತೆ ನೀಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಜ್ಯದಾದ್ಯಂತ ಒಳಮೀಸಲಾತಿಯಲ್ಲಿ ಎಡ ಮತ್ತು ಬಲ ವಿಭಾಗ ಮಾಡಿ ವಿಷ ಉಣಿಸಲಾಗುತ್ತಿದೆ. ಹಿಂದಿನ 15:3 ಅನುಪಾತದ ಮೀಸಲು ಚೆನ್ನಾಗಿತ್ತು ಎಂದರು.</p>.<p>ಗೌರವಾಧ್ಯಕ್ಷ ಬುರುಡೇಘಟ್ಟ ಪ್ರಭುಸ್ವಾಮಿ ಮಾತನಾಡಿ, ತಾಲ್ಲೂಕಿನ ಛಲವಾದಿ ಸಮುದಾಯಕ್ಕೆ ಒಳಮೀಸಲಾತಿಯಲ್ಲಿ ಅನ್ಯಾಯವಾಗಿದೆ. ನ್ಯಾಯ ಒದಗಿಸಬೇಕು. ಹಿಂದೆ ಇದ್ದ ಮೀಸಲಾತಿಯನ್ನೇ ಮತ್ತೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಕಂಚಾಘಟ್ಟ ಮಧುಸೂಧನ್, ಸಿದ್ದೇಶ್ ಕರಡಾಳು, ಶಿವಲಿಂಗಮೂರ್ತಿ, ಶಿವಕುಮಾರ್, ರಘು, ವಸಂತ್, ಸುರೇಶ್, ಮೋಹನ್, ಚನ್ನರಾಜು ಮಹಾಲಿಂಗಪ್ಪ, ನರಸಿಂಹಮೂರ್ತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ತಾಲ್ಲೂಕು ಜೈಭೀಮ್ ಛಲವಾದಿ ಮಹಾಸಬಾ ಹಾಗೂ ಪ್ರಗತಿಪರ ಸಂಘಗಳ ಮಹಾ ಒಕ್ಕೂಟದಿಂದ ನಗರದ ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಆಡಳಿತಸೌಧದವರೆಗೆ ಬೈಕ್ ರ್ಯಾಲಿ, ಪ್ರತಿಭಟನೆ ನಡೆಸಲಾಯಿತು.</p>.<p>ಛಲವಾದಿ ಮಹಾಸಭಾದ ಅಧ್ಯಕ್ಷ ಬಜಗೂರು ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಒಳ ಮೀಸಲಾತಿ ಕೆಲವರಿಗೆ ವಿಷವಾದರೆ, ಇನ್ನು ಕೆಲವರಿಗೆ ಹಾಲು ನೀಡಿದಂತಾಗಿದೆ. ಈ ಅಸಮಾನತೆ ಅಳಿಸಿ ಸಮಾನತೆ ನೀಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಜ್ಯದಾದ್ಯಂತ ಒಳಮೀಸಲಾತಿಯಲ್ಲಿ ಎಡ ಮತ್ತು ಬಲ ವಿಭಾಗ ಮಾಡಿ ವಿಷ ಉಣಿಸಲಾಗುತ್ತಿದೆ. ಹಿಂದಿನ 15:3 ಅನುಪಾತದ ಮೀಸಲು ಚೆನ್ನಾಗಿತ್ತು ಎಂದರು.</p>.<p>ಗೌರವಾಧ್ಯಕ್ಷ ಬುರುಡೇಘಟ್ಟ ಪ್ರಭುಸ್ವಾಮಿ ಮಾತನಾಡಿ, ತಾಲ್ಲೂಕಿನ ಛಲವಾದಿ ಸಮುದಾಯಕ್ಕೆ ಒಳಮೀಸಲಾತಿಯಲ್ಲಿ ಅನ್ಯಾಯವಾಗಿದೆ. ನ್ಯಾಯ ಒದಗಿಸಬೇಕು. ಹಿಂದೆ ಇದ್ದ ಮೀಸಲಾತಿಯನ್ನೇ ಮತ್ತೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಕಂಚಾಘಟ್ಟ ಮಧುಸೂಧನ್, ಸಿದ್ದೇಶ್ ಕರಡಾಳು, ಶಿವಲಿಂಗಮೂರ್ತಿ, ಶಿವಕುಮಾರ್, ರಘು, ವಸಂತ್, ಸುರೇಶ್, ಮೋಹನ್, ಚನ್ನರಾಜು ಮಹಾಲಿಂಗಪ್ಪ, ನರಸಿಂಹಮೂರ್ತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>