<p><strong>ತುಮಕೂರು</strong>: ಪೆಟ್ರೋಲ್ ಬಂಕ್ ಮಾಲೀಕನಿಗೆ ವಿವಿಧ ಸಂಘಟನೆಗಳ ಹೆಸರು ಹೇಳಿಕೊಂಡು ಬೆದರಿಕೆ ಹಾಕಿ, ₹50 ಸಾವಿರ ನಗದು ಪಡೆದುಕೊಂಡಿದ್ದ ಆರೋಪದ ಮೇಲೆ ಮೂವರನ್ನು ಎಸ್ಇಪಿಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕರ್ನಾಟಕ ಜನ ಸೈನ್ಯ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ, ಮರಳೂರು ದಿಣ್ಣೆಯ ಟಿ.ಎಸ್.ರಕ್ಷಿತ್ ಕುಮಾರ್ (33), ಉಪ್ಪಾರಹಳ್ಳಿ ಮಂಜುನಾಥ (46) ಮತ್ತು ಅರುಣ್ (54) ಬಂಧಿತರು.</p>.<p>ಫೆ. 17ರಂದು ಎಸ್.ಎಸ್.ಪುರಂ ಮುಖ್ಯರಸ್ತೆಯಲ್ಲಿರುವ ಶಿವ್ದೇವ್ ಪೆಟ್ರೋಲ್ ಬಂಕ್ಗೆ ಬಂದ ಈ ಮೂರು ಜನ ‘ನೀವು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದೀರಿ, ಪೆಟ್ರೋಲ್ ಬಂಕ್ ಸುಟ್ಟುಹಾಕಿ, ವ್ಯಾಪಾರ ಆಗದಂತೆ ಮಾಡುತ್ತೇವೆ. 200 ಜನರನ್ನು ಸೇರಿಸಿ ಗಲಾಟೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದ್ದರು. ನಂತರ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ₹50 ಸಾವಿರ ನಗದು ಪಡೆದುಕೊಂಡಿದ್ದರು’ ಎಂದು ಪೆಟ್ರೋಲ್ ಬಂಕ್ ಮಾಲೀಕ ಹೊಸ ಬಡಾವಣೆ ಠಾಣೆಗೆ ದೂರು ನೀಡಿದ್ದರು.</p>.<p>ಆರೋಪಿಗಳ ಪತ್ತೆ ತಂಡ ರಚಿಸಲಾಗಿತ್ತು. ಹೊಸ ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಎಚ್.ಡಿ.ವಿದ್ಯಾಶ್ರೀ, ಸಿಬ್ಬಂದಿಯಾದ ನೀಲಕಂಠಯ್ಯ, ಕುಮಾರಸ್ವಾಮಿ, ಮಂಜುನಾಥ, ಲೋಕೇಶ್, ನಿಜಾಮುದ್ದೀನ್ ಶಾ, ಈಶ್ವರ ಅರಕೆರಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಪೆಟ್ರೋಲ್ ಬಂಕ್ ಮಾಲೀಕನಿಗೆ ವಿವಿಧ ಸಂಘಟನೆಗಳ ಹೆಸರು ಹೇಳಿಕೊಂಡು ಬೆದರಿಕೆ ಹಾಕಿ, ₹50 ಸಾವಿರ ನಗದು ಪಡೆದುಕೊಂಡಿದ್ದ ಆರೋಪದ ಮೇಲೆ ಮೂವರನ್ನು ಎಸ್ಇಪಿಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕರ್ನಾಟಕ ಜನ ಸೈನ್ಯ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ, ಮರಳೂರು ದಿಣ್ಣೆಯ ಟಿ.ಎಸ್.ರಕ್ಷಿತ್ ಕುಮಾರ್ (33), ಉಪ್ಪಾರಹಳ್ಳಿ ಮಂಜುನಾಥ (46) ಮತ್ತು ಅರುಣ್ (54) ಬಂಧಿತರು.</p>.<p>ಫೆ. 17ರಂದು ಎಸ್.ಎಸ್.ಪುರಂ ಮುಖ್ಯರಸ್ತೆಯಲ್ಲಿರುವ ಶಿವ್ದೇವ್ ಪೆಟ್ರೋಲ್ ಬಂಕ್ಗೆ ಬಂದ ಈ ಮೂರು ಜನ ‘ನೀವು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದೀರಿ, ಪೆಟ್ರೋಲ್ ಬಂಕ್ ಸುಟ್ಟುಹಾಕಿ, ವ್ಯಾಪಾರ ಆಗದಂತೆ ಮಾಡುತ್ತೇವೆ. 200 ಜನರನ್ನು ಸೇರಿಸಿ ಗಲಾಟೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದ್ದರು. ನಂತರ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ₹50 ಸಾವಿರ ನಗದು ಪಡೆದುಕೊಂಡಿದ್ದರು’ ಎಂದು ಪೆಟ್ರೋಲ್ ಬಂಕ್ ಮಾಲೀಕ ಹೊಸ ಬಡಾವಣೆ ಠಾಣೆಗೆ ದೂರು ನೀಡಿದ್ದರು.</p>.<p>ಆರೋಪಿಗಳ ಪತ್ತೆ ತಂಡ ರಚಿಸಲಾಗಿತ್ತು. ಹೊಸ ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಎಚ್.ಡಿ.ವಿದ್ಯಾಶ್ರೀ, ಸಿಬ್ಬಂದಿಯಾದ ನೀಲಕಂಠಯ್ಯ, ಕುಮಾರಸ್ವಾಮಿ, ಮಂಜುನಾಥ, ಲೋಕೇಶ್, ನಿಜಾಮುದ್ದೀನ್ ಶಾ, ಈಶ್ವರ ಅರಕೆರಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>