<p><strong>ತುಮಕೂರು</strong>: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರ ಹೊರವಲಯದ ಕುಂದೂರಿನ ವಿ.ಟಿ.ಅರುಣಕುಮಾರಿ ಎಂಬುವರು ₹24.35 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಅರುಣ ಫೇಸ್ಬುಕ್ನಲ್ಲಿ KKR Collabarative Company ಷೇರು ಮಾರುಕಟ್ಟೆಯ ಜಾಹೀರಾತು ಕ್ಲಿಕ್ ಮಾಡಿದ್ದಾರೆ. ನಂತರ ಸೈಬರ್ ಆರೋಪಿಗಳು ಅವರ ನಂಬರ್ ಅನ್ನು S-14 KKR Collabarative Win-WIn Group ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿದ್ದಾರೆ. ಸದರಿ ಗ್ರೂಪ್ನಲ್ಲಿ ಹಣ ಹೂಡಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಒಂದು ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು ಅಗತ್ಯ ಮಾಹಿತಿ ಸಲ್ಲಿಸಿ, ಆನ್ಲೈನ್ ಖಾತೆ ತೆರೆದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದಾರೆ.</p>.<p>ಜ. 7ರಿಂದ ಫೆ. 24ರ ವರೆಗೆ ಹಂತ ಹಂತವಾಗಿ ಒಟ್ಟು ₹24,60,430 ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಕೇವಲ ₹25 ಸಾವಿರ ಅರುಣಕುಮಾರಿ ಖಾತೆಗೆ ವಾಪಸ್ ಹಾಕಿದ್ದಾರೆ. ಬಾಕಿ ಹಣ ಹಿಂದಿರುಗಿಸುವಂತೆ ಕೇಳಿದಾಗ ಇನ್ನೂ ಹೆಚ್ಚಿನ ಹಣ ವರ್ಗಾಯಿಸಿದರೆ ವಾಪಸ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದರಿಂದ ಅನುಮಾನಗೊಂಡು ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರ ಹೊರವಲಯದ ಕುಂದೂರಿನ ವಿ.ಟಿ.ಅರುಣಕುಮಾರಿ ಎಂಬುವರು ₹24.35 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಅರುಣ ಫೇಸ್ಬುಕ್ನಲ್ಲಿ KKR Collabarative Company ಷೇರು ಮಾರುಕಟ್ಟೆಯ ಜಾಹೀರಾತು ಕ್ಲಿಕ್ ಮಾಡಿದ್ದಾರೆ. ನಂತರ ಸೈಬರ್ ಆರೋಪಿಗಳು ಅವರ ನಂಬರ್ ಅನ್ನು S-14 KKR Collabarative Win-WIn Group ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿದ್ದಾರೆ. ಸದರಿ ಗ್ರೂಪ್ನಲ್ಲಿ ಹಣ ಹೂಡಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಒಂದು ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು ಅಗತ್ಯ ಮಾಹಿತಿ ಸಲ್ಲಿಸಿ, ಆನ್ಲೈನ್ ಖಾತೆ ತೆರೆದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದಾರೆ.</p>.<p>ಜ. 7ರಿಂದ ಫೆ. 24ರ ವರೆಗೆ ಹಂತ ಹಂತವಾಗಿ ಒಟ್ಟು ₹24,60,430 ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಕೇವಲ ₹25 ಸಾವಿರ ಅರುಣಕುಮಾರಿ ಖಾತೆಗೆ ವಾಪಸ್ ಹಾಕಿದ್ದಾರೆ. ಬಾಕಿ ಹಣ ಹಿಂದಿರುಗಿಸುವಂತೆ ಕೇಳಿದಾಗ ಇನ್ನೂ ಹೆಚ್ಚಿನ ಹಣ ವರ್ಗಾಯಿಸಿದರೆ ವಾಪಸ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದರಿಂದ ಅನುಮಾನಗೊಂಡು ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>