<p><strong>ತುಮಕೂರು:</strong> ಮಕ್ಕಳು ಮೊಬೈಲ್ ಗೀಳಿಗೆ ಬೀಳದೆ, ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಾಧನೆಯತ್ತ ಮುಖ ಮಾಡಬೇಕು ಎಂದು ಇಸ್ರೋ ವಿಜ್ಞಾನಿ ರಾಮನಗೌಡ ವೆಂಕನಗೌಡ ನಾಡಗೌಡ ಸಲಹೆ ನೀಡಿದರು.</p>.<p>ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ವಿದ್ಯಾನಿಕೇತನ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳು ಯಾವುದೇ ಕಾರಣಕ್ಕೂ ಮೊಬೈಲ್ ಗೀಳಿಗೆ ಒಳಗಾಗಬಾರದು. ಮೊಬೈಲ್ ಬಿಟ್ಟು, ಪುಸ್ತಕ ಹಿಡಿದು ಜ್ಞಾನಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದರು.</p>.<p>ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿಜ್ಞಾನ ಕ್ಷೇತ್ರ ಅತ್ಯಂತ ಮಹತ್ವದ ಸ್ಥಾನ ಪಡೆದುಕೊಂಡಿದೆ. ಹಾಗಾಗಿ ಮಕ್ಕಳು ವಿಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ, ‘ಮಕ್ಕಳು ಉತ್ತಮ ಶಿಕ್ಷಣ ಪಡೆದು ಪೋಷಕರ ಆಸೆ ಪೂರೈಸಬೇಕು. ಹೆತ್ತವರು, ಶಿಕ್ಷಣ ನೀಡಿದ ಗುರುಗಳು, ಕಲಿತ ಶಾಲೆಗೆ ಕೀರ್ತಿ ತರಬೇಕು’ ಎಂದು ತಿಳಿಸಿದರು.</p>.<p>ಸಂಸ್ಥೆ ಅಧ್ಯಕ್ಷ ಪಿ.ಪಿ.ಮಲ್, ಉಪಾಧ್ಯಕ್ಷ ಜಿ.ಆರ್.ಸುರೇಶ್, ಜಂಟಿ ಕಾರ್ಯದರ್ಶಿ ಟಿ.ಆರ್.ಸಾಯಿಪ್ರಸಾದ್, ಖಜಾಂಚಿ ಆನಂದರಾಮು ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಮಕ್ಕಳು ಮೊಬೈಲ್ ಗೀಳಿಗೆ ಬೀಳದೆ, ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಾಧನೆಯತ್ತ ಮುಖ ಮಾಡಬೇಕು ಎಂದು ಇಸ್ರೋ ವಿಜ್ಞಾನಿ ರಾಮನಗೌಡ ವೆಂಕನಗೌಡ ನಾಡಗೌಡ ಸಲಹೆ ನೀಡಿದರು.</p>.<p>ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ವಿದ್ಯಾನಿಕೇತನ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳು ಯಾವುದೇ ಕಾರಣಕ್ಕೂ ಮೊಬೈಲ್ ಗೀಳಿಗೆ ಒಳಗಾಗಬಾರದು. ಮೊಬೈಲ್ ಬಿಟ್ಟು, ಪುಸ್ತಕ ಹಿಡಿದು ಜ್ಞಾನಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದರು.</p>.<p>ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿಜ್ಞಾನ ಕ್ಷೇತ್ರ ಅತ್ಯಂತ ಮಹತ್ವದ ಸ್ಥಾನ ಪಡೆದುಕೊಂಡಿದೆ. ಹಾಗಾಗಿ ಮಕ್ಕಳು ವಿಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ, ‘ಮಕ್ಕಳು ಉತ್ತಮ ಶಿಕ್ಷಣ ಪಡೆದು ಪೋಷಕರ ಆಸೆ ಪೂರೈಸಬೇಕು. ಹೆತ್ತವರು, ಶಿಕ್ಷಣ ನೀಡಿದ ಗುರುಗಳು, ಕಲಿತ ಶಾಲೆಗೆ ಕೀರ್ತಿ ತರಬೇಕು’ ಎಂದು ತಿಳಿಸಿದರು.</p>.<p>ಸಂಸ್ಥೆ ಅಧ್ಯಕ್ಷ ಪಿ.ಪಿ.ಮಲ್, ಉಪಾಧ್ಯಕ್ಷ ಜಿ.ಆರ್.ಸುರೇಶ್, ಜಂಟಿ ಕಾರ್ಯದರ್ಶಿ ಟಿ.ಆರ್.ಸಾಯಿಪ್ರಸಾದ್, ಖಜಾಂಚಿ ಆನಂದರಾಮು ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>