<p><strong>ಶಿರಾ:</strong> ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಮನೆಗಳೇ ಇಲ್ಲದ ಕಡೆ ನಲ್ಲಿ ಹಾಕಿರುವುದು ಚರ್ಚೆಗೆ ಕಾರಣವಾಗಿದ್ದು, ಮನೆಗೆ ಇಲ್ಲದ ನಲ್ಲಿ ಜಮೀನಿಗೆ ಎನ್ನುವಂತಾಗಿದೆ.</p>.<p>ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ಹೊಸಮಲ್ಲನಹಳ್ಳಿ ಗ್ರಾಮದಲ್ಲಿ ಮನೆಗಳೇ ಇಲ್ಲದ ಕಡೆ ಜಮೀನಿನಲ್ಲಿ ಹಾಕಿ ಸರ್ಕಾರದ ಹಣವನ್ನು ಪೋಲು ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಜಲಜೀವನ್ ಯೋಜನೆಯಲ್ಲಿ ಮನೆಗಳಿಗೆ ಕುಡಿಯುವ ನೀರು ಕೊಡಲು ಅವಕಾಶವಿದೆ. ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜಮೀನಿಗೆ ನೀರು ಕೊಡಲು ಹೊರಟಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ.</p>.<p>ಸಮೀಪದಲ್ಲಿ ಎಲ್ಲಿಯೂ ಮನೆಗಳು ಇಲ್ಲದಿದ್ದರೂ ಜಮೀನಿನಲ್ಲಿ ನಲ್ಲಿ ಏಕೆ ಹಾಕಿದ್ದಾರೆ. ರಸ್ತೆ ಬದಿ ಹಾಕುವಂತಿದ್ದರೆ, ಬೇರೆ ಕಡೆ ಏಕೆ ಹಾಕಿಲ್ಲ ಎನ್ನುವುದು ಸ್ಥಳೀಯರ ಪ್ರಶ್ನೆ.</p>.<p>ಜಲಜೀವನ್ ಯೋಜನೆಯಲ್ಲಿ ಕಳಪೆ ಕಾಮಗಾರಿ ಬಗ್ಗೆ ಕೆಲವೆಡೆ ದೂರು ಬಂದರೆ ಮತ್ತೆ ಕೆಲವೆಡೆ ಅವಶ್ಯಕತೆ ಇಲ್ಲದಿದ್ದರೂ ಇಷ್ಟ ಬಂದಂತೆ ನಲ್ಲಿಗಳನ್ನು ಹಾಕಿದ್ದಾರೆ.</p>.<p>ಸೂಕ್ತವಲ್ಲದ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಹಾಕದ ನಲ್ಲಿಗಳನ್ನು ತೆರವುಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಮನೆಗಳೇ ಇಲ್ಲದ ಕಡೆ ನಲ್ಲಿ ಹಾಕಿರುವುದು ಚರ್ಚೆಗೆ ಕಾರಣವಾಗಿದ್ದು, ಮನೆಗೆ ಇಲ್ಲದ ನಲ್ಲಿ ಜಮೀನಿಗೆ ಎನ್ನುವಂತಾಗಿದೆ.</p>.<p>ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ಹೊಸಮಲ್ಲನಹಳ್ಳಿ ಗ್ರಾಮದಲ್ಲಿ ಮನೆಗಳೇ ಇಲ್ಲದ ಕಡೆ ಜಮೀನಿನಲ್ಲಿ ಹಾಕಿ ಸರ್ಕಾರದ ಹಣವನ್ನು ಪೋಲು ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಜಲಜೀವನ್ ಯೋಜನೆಯಲ್ಲಿ ಮನೆಗಳಿಗೆ ಕುಡಿಯುವ ನೀರು ಕೊಡಲು ಅವಕಾಶವಿದೆ. ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜಮೀನಿಗೆ ನೀರು ಕೊಡಲು ಹೊರಟಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ.</p>.<p>ಸಮೀಪದಲ್ಲಿ ಎಲ್ಲಿಯೂ ಮನೆಗಳು ಇಲ್ಲದಿದ್ದರೂ ಜಮೀನಿನಲ್ಲಿ ನಲ್ಲಿ ಏಕೆ ಹಾಕಿದ್ದಾರೆ. ರಸ್ತೆ ಬದಿ ಹಾಕುವಂತಿದ್ದರೆ, ಬೇರೆ ಕಡೆ ಏಕೆ ಹಾಕಿಲ್ಲ ಎನ್ನುವುದು ಸ್ಥಳೀಯರ ಪ್ರಶ್ನೆ.</p>.<p>ಜಲಜೀವನ್ ಯೋಜನೆಯಲ್ಲಿ ಕಳಪೆ ಕಾಮಗಾರಿ ಬಗ್ಗೆ ಕೆಲವೆಡೆ ದೂರು ಬಂದರೆ ಮತ್ತೆ ಕೆಲವೆಡೆ ಅವಶ್ಯಕತೆ ಇಲ್ಲದಿದ್ದರೂ ಇಷ್ಟ ಬಂದಂತೆ ನಲ್ಲಿಗಳನ್ನು ಹಾಕಿದ್ದಾರೆ.</p>.<p>ಸೂಕ್ತವಲ್ಲದ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಹಾಕದ ನಲ್ಲಿಗಳನ್ನು ತೆರವುಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>