ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಇಲಾಖಾವಾರು ಅರ್ಜಿ ಸ್ವೀಕಾರ ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸ್ವೀಕಾರ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 101 ಅರ್ಜಿ ತಾಲ್ಲೂಕು ಪಂಚಾಯಿತಿ-25 ಪಟ್ಟಣ ಪಂಚಾಯಿತಿ-10 ಬೆಸ್ಕಾಂ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗ-ತಲಾ 6 ಅರ್ಜಿಗಳು ಸಲ್ಲಿಕೆಯಾದವು. ಒಟ್ಟು 181 ಅಹವಾಲುಗಳು ಸ್ವೀಕೃತವಾಗಿವೆ.