ತುಮಕೂರು: ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ಪತ್ರಿಕೆಗಳ ಆಶ್ರಯದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ತುಮಕೂರು ನಗರಕ್ಕೆ ಸಂಬಂಧಿಸಿವಿವಿಧ ವಿಚಾರಗಳ ಕುರಿತು ಬಿಸಿ ಬಿಸಿ ಚರ್ಚೆ ನಡೆಯಿತು.
ಕಸ ವಿಲೇವಾರಿ, ರಸ್ತೆ ದುರಸ್ತಿ, ಸಂಚಾರ ದಟ್ಟಣೆ, ಪಾರ್ಕಿಂಗ್ ಸಮಸ್ಯೆ, ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಮೊದಲಾದ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದರು.
ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಎಸ್ಪಿ ದಿವ್ಯಾ ಗೋಪಿನಾಥ್, ಶಾಸಕ ಜ್ಯೋತಿ ಗಣೇಶ್, ಪಾಲಿಕೆ ಆಯುಕ್ತ ಮಂಜುನಾಥ ಸ್ವಾಮಿ ಹಾಗೂ ಪಾಲಿಕೆ ಸದಸ್ಯರು ಪ್ರಶ್ನೆಗಳಿಗೆ ಉತ್ತರಿಸಿದರು.