ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಹೋಬಳಿ ಹುಯಿಲ್ದೊರೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಯಲಿದೆ. 8ರಂದು ಬೆಳಿಗ್ಗೆ 7ಕ್ಕೆ ಹುಯಿಲ್ದೊರೆ ಗ್ರಾಮ ಪಂಚಾಯಿತಿಯಿಂದ ಬುಕ್ಕಾಪಟ್ಟಣದ ವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ. ಜಾಥಾವನ್ನು ನಿವೃತ್ತ ಉಪವಿಭಾಗಾಧಿಕಾರಿ ಭಕ್ತರಾಮೇಗೌಡ ಉದ್ಘಾಟಿಸುವರು. ಸಂಜೆ 6ಕ್ಕೆ ಗ್ರಾಮೀಣ ಜನರೊಂದಿಗೆ ಚರ್ಚೆ ನಡೆಯಲಿದೆ. ಪರಿಸರವಾದಿ ಸಿ.ಯತಿರಾಜ್, ರಂಗಕರ್ಮಿ ಉಗಮ ಶ್ರೀನಿವಾಸ್, ಜನಪದ ವಿದ್ವಾಂಸ ಡಾ.ಚಿಕ್ಕಣ್ಣ ಯಣ್ಣೇಕಟ್ಟೆ ಭಾಗವಹಿಸುವರು. ತಾಲ್ಲೂಕು ಸರ್ವೋದಯ ಮಂಡಲದ ಅಧ್ಯಕ್ಷ ಲೋಕೇಶ್ ಅಗ್ರಹಾರ ಅಧ್ಯಕ್ಷತೆ ವಹಿಸುವರು.