12ರಂದು ಅಮ್ಮನವರಿಗೆ, ಆಭಯಾಂಜನೇಯ, ರಾಘವೇಂದ್ರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ, ಅಲಂಕಾರ, ಹೋಮ ನಡೆಯಲಿದೆ. ನಂತರ ಲಕ್ಷ್ಮಿವೆಂಕಟೇಶ್ವರ ಭಜನಾ ಮಂಡಳಿಯಿಂದ ಭಜನೆ ಮತ್ತು ಲಲಿತ ಸಹಸ್ರನಾಮ ಪಾರಾಯಣವಿದೆ. ಬಾಳೆಹೊನ್ನೂರು ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಪ್ರಮುಖ ಬೀದಿಗಳಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. 14ರಂದು ಅಮ್ಮನವರ ಉತ್ಸವ ನಡೆಯಲಿದೆ ಎಂದು ದೇವಾಲಯದ ಸಮಿತಿ ತಿಳಿಸಿದೆ.