ಜಯಮಂಗಲಿ ಪ್ರಕಾಶನದಿಂದ ಪ್ರತಿವರ್ಷ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಲೇಖಕ ಎಂ.ಎಚ್. ನಾಗರಾಜು, ಬಿ. ಮರುಳಯ್ಯ, ಒಕ್ಕಲಿಗರ ಸಂಘದ ನಿರ್ದೇಶಕ ಆರ್. ಹನುಮಂತರಾಯಪ್ಪ, ಕವಿ ದುಗ್ಗೇನಹಳ್ಳಿ ಸಿದ್ದೇಶ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಎಚ್.ಡಿ. ದೇವೇಗೌಡ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.