ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ದೇವೇಗೌಡರಿಗೆ ಜಯಮಂಗಲಿ ಪ್ರಶಸ್ತಿ

Last Updated 11 ಏಪ್ರಿಲ್ 2022, 16:28 IST
ಅಕ್ಷರ ಗಾತ್ರ

ತುಮಕೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ 2021ನೇ ಸಾಲಿನ ಜಯಮಂಗಲಿ ಪ್ರಶಸ್ತಿಗೆ ಭಾಜನ ರಾಗಿದ್ದಾರೆ.

ಜಯಮಂಗಲಿ ಪ್ರಕಾಶನದಿಂದ ಪ್ರತಿವರ್ಷ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಲೇಖಕ ಎಂ.ಎಚ್‌. ನಾಗರಾಜು, ಬಿ. ಮರುಳಯ್ಯ, ಒಕ್ಕಲಿಗರ ಸಂಘದ ನಿರ್ದೇಶಕ ಆರ್‌. ಹನುಮಂತರಾಯಪ್ಪ, ಕವಿ ದುಗ್ಗೇನಹಳ್ಳಿ ಸಿದ್ದೇಶ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಎಚ್‌.ಡಿ. ದೇವೇಗೌಡ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ದೇವೇಗೌಡ ಅವರ ಜೀವಮಾನದ ರಾಜಕೀಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಕಾಶನದ ಮೊದಲ ಪ್ರಶಸ್ತಿಯಾಗಿದ್ದು, ಪ್ರಶಸ್ತಿ ವಿತರಿಸುವ ಕೆಲಸ ಹೀಗೆ ಮುಂದುವರಿಯಲಿದೆ ಎಂದು ಕವಿ ದುಗ್ಗೇನಹಳ್ಳಿ ಸಿದ್ದೇಶ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT