<p><strong>ತುಮಕೂರು: </strong>ಅರಣ್ಯ ಸಚಿವ ಆನಂದ್ ಸಿಂಗ್ ಜತೆ ಮಾತನಾಡಿ ಚಿರತೆ ಶೂಟೌಟ್ಗೆ ಆದೇಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಚಿರತೆಗೆ ಮಗು ಬಲಿಯಾದ ಹೆಬ್ಬೂರು ಹೋಬಳಿ ಬೈಚೇನಹಳ್ಳಿಗೆ ಭೇಟಿ ನೀಡಿ, ಅವರು ಸುದ್ದಿಗಾರರರೊಂದಿಗೆ ಮಾತನಾಡಿದರು.</p>.<p>ಈ ಮಧ್ಯೆ, ಮೃತ ಚಂದನಾಳ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮುಖಂಡರು ಗ್ರಾಮಕ್ಕೆ ಭೇಟಿ ನೀಡಿ ಕುಂಟುಬಸ್ಥರಿಗೆ ಹಾಗೂ ಗ್ರಾಮಸ್ಥರಿಗೆ ಸಾಂತ್ವಾನ ಹೇಳುತ್ತಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/tumakuru/tumkur-loopard-attack-leopard-in-cage-709175.html" itemprop="url" target="_blank">ತುಮಕೂರು: ಹೊನ್ನುಡಿಕೆ ಬಳಿ ಬೋನಿಗೆ ಬಿದ್ದ ಚಿರತೆ</a></p>.<p>ಸ್ಥಳದಲ್ಲಿ ಬಿಗಿಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ.</p>.<p>ನಮಗೆ ಪರಿಹಾರ ಬೇಡ, ಚಿರತೆಯನ್ನು ಹೊಡೆದುರುಳಿಸಬೇಕು. ನನ್ನ ಮಗಳಿಗೆ ನೀಡುವ ಪರಿಹಾರವನ್ನ ಚಿರತೆಯನ್ನು ಹೊಡೆಯುವ ವ್ಯಕ್ತಿಗೆ ನೀಡಬೇಕು ಎಂದು ಚಂದನಾಳ ತಂದೆ ಶ್ರೀನಿವಾಸ್ ತಿಳಿಸಿದರು.</p>.<p>ಬಡವರ ಕಷ್ಟ ನಿಮಗೆ ಅರ್ಥ ಆಗಲ್ಲ, ನಿಮ್ಮ ಹೆಂಡತಿ ಮಕ್ಕಳನ್ನು ತಂದು ಇಲ್ಲಿ ಬಿಡಿ, ಅವರನ್ನು ನಾವು ಸಾಕುತ್ತೇವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/tumakuru/leopard-attack-child-death-709108.html" itemprop="url" target="_blank">ತುಮಕೂರು: ಆಟವಾಡುತ್ತಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದು ಕೊಂದ ಚಿರತೆ</a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಅರಣ್ಯ ಸಚಿವ ಆನಂದ್ ಸಿಂಗ್ ಜತೆ ಮಾತನಾಡಿ ಚಿರತೆ ಶೂಟೌಟ್ಗೆ ಆದೇಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಚಿರತೆಗೆ ಮಗು ಬಲಿಯಾದ ಹೆಬ್ಬೂರು ಹೋಬಳಿ ಬೈಚೇನಹಳ್ಳಿಗೆ ಭೇಟಿ ನೀಡಿ, ಅವರು ಸುದ್ದಿಗಾರರರೊಂದಿಗೆ ಮಾತನಾಡಿದರು.</p>.<p>ಈ ಮಧ್ಯೆ, ಮೃತ ಚಂದನಾಳ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮುಖಂಡರು ಗ್ರಾಮಕ್ಕೆ ಭೇಟಿ ನೀಡಿ ಕುಂಟುಬಸ್ಥರಿಗೆ ಹಾಗೂ ಗ್ರಾಮಸ್ಥರಿಗೆ ಸಾಂತ್ವಾನ ಹೇಳುತ್ತಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/tumakuru/tumkur-loopard-attack-leopard-in-cage-709175.html" itemprop="url" target="_blank">ತುಮಕೂರು: ಹೊನ್ನುಡಿಕೆ ಬಳಿ ಬೋನಿಗೆ ಬಿದ್ದ ಚಿರತೆ</a></p>.<p>ಸ್ಥಳದಲ್ಲಿ ಬಿಗಿಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ.</p>.<p>ನಮಗೆ ಪರಿಹಾರ ಬೇಡ, ಚಿರತೆಯನ್ನು ಹೊಡೆದುರುಳಿಸಬೇಕು. ನನ್ನ ಮಗಳಿಗೆ ನೀಡುವ ಪರಿಹಾರವನ್ನ ಚಿರತೆಯನ್ನು ಹೊಡೆಯುವ ವ್ಯಕ್ತಿಗೆ ನೀಡಬೇಕು ಎಂದು ಚಂದನಾಳ ತಂದೆ ಶ್ರೀನಿವಾಸ್ ತಿಳಿಸಿದರು.</p>.<p>ಬಡವರ ಕಷ್ಟ ನಿಮಗೆ ಅರ್ಥ ಆಗಲ್ಲ, ನಿಮ್ಮ ಹೆಂಡತಿ ಮಕ್ಕಳನ್ನು ತಂದು ಇಲ್ಲಿ ಬಿಡಿ, ಅವರನ್ನು ನಾವು ಸಾಕುತ್ತೇವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/tumakuru/leopard-attack-child-death-709108.html" itemprop="url" target="_blank">ತುಮಕೂರು: ಆಟವಾಡುತ್ತಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದು ಕೊಂದ ಚಿರತೆ</a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>