<p><strong>ತುಮಕೂರು: </strong>ಅತ್ಯಾಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವ ಕಾನೂನು ತರದೇ ಹೋದರೆ ಕಷ್ಟವಾಗಲಿದೆ. ಹಾಗಾಗಿ ಕೆಲ ಕಾನೂನು ತಿದ್ದುಪಡಿ ಮಾಡುವಂತೆ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೈದರಾಬಾದ್ ಎನ್ಕೌಂಟರ್ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ನಮ್ಮ ಕಾನೂನಿನಲ್ಲೆ ಕೆಲ ತಿದ್ದುಪಡಿಯಾಗಬೇಕು. ನಾನೊಬ್ಬ ಕಾನೂನು ಸಚಿವನಾಗಿ ಕೆಲ ಕಾನೂನು ವಿಷಯದ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲಿದ್ದೇನೆ’ ಎಂದರು.</p>.<p>ದೇಶದಲ್ಲಿ 1860ರಷ್ಟು ಹಿಂದೆ ಮಾಡಿರುವಂತಹ ಐಪಿಸಿ, ಸಿಆರ್ಪಿಸಿ ಕಾಯ್ದೆಗಳು ಈಗ ಸತ್ವ ಕಳೆದುಕೊಂಡಿವೆ. ಅಂದು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಮಾಡಿದರೆ ₹1 ಸಾವಿರ ದಂಡ ಅಂತಿದ್ದು, ಈ ₹1 ಸಾವಿರ ದಂಡವನ್ನು ಆರೋಪಿಗಳು ಖುಷಿಯಾಗಿ ಕೊಟ್ಟು ಹೋಗುತ್ತಾರೆ. ಈ ಬಗ್ಗೆ ಕಾನೂನು ಬಿಗಿಯಾಗಬೇಕಿದೆ. ಇದರ ಕುರಿತು ನಾವು ಚರ್ಚೆ ಮಾಡಿ ಕಾನೂನು ತಿದ್ದುಪಡಿ ಮಾಡುವಂತೆ ಸಂಸತ್ತಿಗೆ ಸಲಹೆ ನೀಡುತ್ತೇವೆ ಎಂದು ತಿಳಿಸಿದರು.</p>.<p>ಅಲ್ಲದೇ ರಾಜ್ಯದಲ್ಲಿ ಅಹಿತಕರ ಘಟನೆಗಳು ಆಗಲು ಬಿಡುವುದಿಲ್ಲ. ನಾನು ಮತ್ತು ಗೃಹಸಚಿವರು ಸದಾ ಸಂಪರ್ಕದಲ್ಲಿ ಇದ್ದು, ಮುಖ್ಯವಾಗಿ ಬೆಂಗಳೂರು ನಗರದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಅತ್ಯಾಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವ ಕಾನೂನು ತರದೇ ಹೋದರೆ ಕಷ್ಟವಾಗಲಿದೆ. ಹಾಗಾಗಿ ಕೆಲ ಕಾನೂನು ತಿದ್ದುಪಡಿ ಮಾಡುವಂತೆ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೈದರಾಬಾದ್ ಎನ್ಕೌಂಟರ್ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ನಮ್ಮ ಕಾನೂನಿನಲ್ಲೆ ಕೆಲ ತಿದ್ದುಪಡಿಯಾಗಬೇಕು. ನಾನೊಬ್ಬ ಕಾನೂನು ಸಚಿವನಾಗಿ ಕೆಲ ಕಾನೂನು ವಿಷಯದ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲಿದ್ದೇನೆ’ ಎಂದರು.</p>.<p>ದೇಶದಲ್ಲಿ 1860ರಷ್ಟು ಹಿಂದೆ ಮಾಡಿರುವಂತಹ ಐಪಿಸಿ, ಸಿಆರ್ಪಿಸಿ ಕಾಯ್ದೆಗಳು ಈಗ ಸತ್ವ ಕಳೆದುಕೊಂಡಿವೆ. ಅಂದು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಮಾಡಿದರೆ ₹1 ಸಾವಿರ ದಂಡ ಅಂತಿದ್ದು, ಈ ₹1 ಸಾವಿರ ದಂಡವನ್ನು ಆರೋಪಿಗಳು ಖುಷಿಯಾಗಿ ಕೊಟ್ಟು ಹೋಗುತ್ತಾರೆ. ಈ ಬಗ್ಗೆ ಕಾನೂನು ಬಿಗಿಯಾಗಬೇಕಿದೆ. ಇದರ ಕುರಿತು ನಾವು ಚರ್ಚೆ ಮಾಡಿ ಕಾನೂನು ತಿದ್ದುಪಡಿ ಮಾಡುವಂತೆ ಸಂಸತ್ತಿಗೆ ಸಲಹೆ ನೀಡುತ್ತೇವೆ ಎಂದು ತಿಳಿಸಿದರು.</p>.<p>ಅಲ್ಲದೇ ರಾಜ್ಯದಲ್ಲಿ ಅಹಿತಕರ ಘಟನೆಗಳು ಆಗಲು ಬಿಡುವುದಿಲ್ಲ. ನಾನು ಮತ್ತು ಗೃಹಸಚಿವರು ಸದಾ ಸಂಪರ್ಕದಲ್ಲಿ ಇದ್ದು, ಮುಖ್ಯವಾಗಿ ಬೆಂಗಳೂರು ನಗರದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>