ಈಗ ಜಿಲ್ಲೆಯವರೇ ಆದ ಬಿ.ಕೆ.ಮಂಜುನಾಥ್, ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆಗಿದ್ದಾರೆ. ಕಾಯಿ ಮತ್ತು ಕೊಬ್ಬರಿ ಸೀಮೆ ಖ್ಯಾತಿಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುಮಕೂರು, ತುರುವೇಕೆರೆಯಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಂಗು ಪಾರ್ಕ್ ನಿರ್ಮಾಣಕ್ಕೆ ಮತ್ತೆ ಹಸಿರು ನಿಶಾನೆ ತೋರಿ ಹಣ ಬಿಡುಗಡೆ ಮಾಡುವರು ಎನ್ನುವ ಆಶಾವಾದ ಗರಿಗೆದರಿದೆ.