<p><strong>ತುಮಕೂರು: </strong>ಪ್ರಕೃತಿಯಲ್ಲಿ ಪ್ರತಿ ರೋಗಕ್ಕೂ ಔಷಧಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಕರ್ನಾಟಕ ಪಶುವೈದ್ಯಕೀಯ ಸಂಘ ಮತ್ತು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಸಿದ್ಧಾರ್ಥ ತಾಂತ್ರಿಕ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಾಂಪ್ರದಾಯಿಕ ಪಶುಚಿಕಿತ್ಸೆ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>ಹಾಲು ಉತ್ಪಾದನೆ ರೈತರ ಉಪಕಸುಬಾಗಿದೆ. ಗರಿಷ್ಠ ಲಾಭವನ್ನು ಉಪಕಸುಬು ದೊರೆಕಿಸಿಕೊಡುತ್ತಿದೆ. ತುಮಕೂರಿನಂತಹ ಅರೆ ಬರಪೀಡಿತ ಜಿಲ್ಲೆಯಲ್ಲಿ 75 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹೈನುಗಾರಿಕೆ ಲಾಭದಾಯಕ ಆಗಬೇಕಾದರೆ ಕೃತಕ ಗರ್ಭಧಾರಣೆ ಮಾಡಿಸಬೇಕು. ತಳಿ ಉನ್ನತೀಕರಣ ಮಾಡಬೇಕು ಎಂದು ಹೇಳಿದರು.</p>.<p>ಉತ್ಪಾದನಾ ವೆಚ್ಚ ಕಡಿಮೆಯಾದರೆ, ಲಾಭ ಹೆಚ್ಚುತ್ತದೆ. ಅದಕ್ಕಾಗಿಯೇ ತುಮುಲ್ನಿಂದ ತಳಿಗಳನ್ನು ಸಾಕಲು ಅಗತ್ಯ ಔಷಧ ಮತ್ತು ಪಶುಆಹಾರವನ್ನು ನೀಡಲಾಗುತ್ತಿದೆ. ಅನುಕರಣೆಯಿಂದ ನಮ್ಮ ಮೂಲದ ಹೈನು ಉತ್ಪಾದಕರು ನಶಿಸಿದರು ಎಂದರು.</p>.<p>ಪಾಶ್ಚಾತ್ಯ ಔಷಧದ ಮೊರೆ ಹೋಗುವ ಮೂಲಕ ನಮ್ಮ ಮೂಲವನ್ನು ಮರೆಯುತ್ತಿದ್ದೇವೆ. ನಮ್ಮ ಪರಂಪರೆಯಲ್ಲಿಯೇ ಸಿಗುವ ಪ್ರಕೃತಿ ದತ್ತವಾದ ಔಷಧಗಳನ್ನು ಕಂಡುಕೊಳ್ಳುವಲ್ಲಿ ವಿಫಲವಾಗಿದ್ದೇವೆ ಎಂದು ತಿಳಿಸಿದರು.</p>.<p>ಶಾಸಕ ಜ್ಯೋತಿಗಣೇಶ್, ಈಗಿರುವ ಚಿಕಿತ್ಸಾ ಪದ್ಧತಿಯನ್ನು ಬದಲಾಯಿಸಬೇಕಾದ ಅನಿವಾರ್ಯತೆ ಇದೆ. ನಮ್ಮ ಸಾಂಪ್ರದಾಯಿಕ ಪದ್ಧತಿಯಲ್ಲಿಯೇ ಅಗತ್ಯವಾದ ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಹೇಳಿದರು.</p>.<p>ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಿ.ಸಿ.ರುದ್ರಪ್ರಸಾದ್, ಶಿರಾಗೇಟ್ನಲ್ಲಿ ₹ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡು 2 ವರ್ಷ ಕಳೆದರೂ ಉದ್ಘಾಟನೆಯಾಗದೆ ನನೆಗುದಿಗೆ ಬಿದ್ದಿದೆ. ಜಿಲ್ಲೆಯಲ್ಲಿ ತಜ್ಞ ವೈದ್ಯರಿದ್ದು, ಆಸ್ಪತ್ರೆಯನ್ನು ಶೀಘ್ರವಾಗಿ ಉದ್ಘಾಟಿಸುವ ಮೂಲಕ ರೈತರಿಗೆ ಉಪಯೋಗವಾಗುವಂತೆ ಮಾಡಬೇಕು ಮನವಿ ಮಾಡಿದರು.</p>.<p>ಪಶುವೈದ್ಯಕೀಯ ತಜ್ಞ ಪಿ.ಮನೋಹರ್ ಉಪಾಧ್ಯ, ಪಶುಇಲಾಖೆ ಉಪನಿರ್ದೇಶಕ ಎಲ್.ಪ್ರಕಾಶ್, ಪಶುವೈದ್ಯಕೀಯ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಂ.ನಾಗಭೂಷಣ, ಉಪಾಧ್ಯಕ್ಷ ಎ.ಸಿ.ದಿವಾಕರ್, ಮಹದೇವಯ್ಯ, ಬಿ.ಆರ್.ನಂಜೇಗೌಡ, ಡಾ.ಶಶಿಕಲಾ ಎಚ್., ಡಾ.ಶಶಿಕಾಂತ್ ಬೂದಿಹಾಳ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಪ್ರಕೃತಿಯಲ್ಲಿ ಪ್ರತಿ ರೋಗಕ್ಕೂ ಔಷಧಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಕರ್ನಾಟಕ ಪಶುವೈದ್ಯಕೀಯ ಸಂಘ ಮತ್ತು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಸಿದ್ಧಾರ್ಥ ತಾಂತ್ರಿಕ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಾಂಪ್ರದಾಯಿಕ ಪಶುಚಿಕಿತ್ಸೆ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>ಹಾಲು ಉತ್ಪಾದನೆ ರೈತರ ಉಪಕಸುಬಾಗಿದೆ. ಗರಿಷ್ಠ ಲಾಭವನ್ನು ಉಪಕಸುಬು ದೊರೆಕಿಸಿಕೊಡುತ್ತಿದೆ. ತುಮಕೂರಿನಂತಹ ಅರೆ ಬರಪೀಡಿತ ಜಿಲ್ಲೆಯಲ್ಲಿ 75 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹೈನುಗಾರಿಕೆ ಲಾಭದಾಯಕ ಆಗಬೇಕಾದರೆ ಕೃತಕ ಗರ್ಭಧಾರಣೆ ಮಾಡಿಸಬೇಕು. ತಳಿ ಉನ್ನತೀಕರಣ ಮಾಡಬೇಕು ಎಂದು ಹೇಳಿದರು.</p>.<p>ಉತ್ಪಾದನಾ ವೆಚ್ಚ ಕಡಿಮೆಯಾದರೆ, ಲಾಭ ಹೆಚ್ಚುತ್ತದೆ. ಅದಕ್ಕಾಗಿಯೇ ತುಮುಲ್ನಿಂದ ತಳಿಗಳನ್ನು ಸಾಕಲು ಅಗತ್ಯ ಔಷಧ ಮತ್ತು ಪಶುಆಹಾರವನ್ನು ನೀಡಲಾಗುತ್ತಿದೆ. ಅನುಕರಣೆಯಿಂದ ನಮ್ಮ ಮೂಲದ ಹೈನು ಉತ್ಪಾದಕರು ನಶಿಸಿದರು ಎಂದರು.</p>.<p>ಪಾಶ್ಚಾತ್ಯ ಔಷಧದ ಮೊರೆ ಹೋಗುವ ಮೂಲಕ ನಮ್ಮ ಮೂಲವನ್ನು ಮರೆಯುತ್ತಿದ್ದೇವೆ. ನಮ್ಮ ಪರಂಪರೆಯಲ್ಲಿಯೇ ಸಿಗುವ ಪ್ರಕೃತಿ ದತ್ತವಾದ ಔಷಧಗಳನ್ನು ಕಂಡುಕೊಳ್ಳುವಲ್ಲಿ ವಿಫಲವಾಗಿದ್ದೇವೆ ಎಂದು ತಿಳಿಸಿದರು.</p>.<p>ಶಾಸಕ ಜ್ಯೋತಿಗಣೇಶ್, ಈಗಿರುವ ಚಿಕಿತ್ಸಾ ಪದ್ಧತಿಯನ್ನು ಬದಲಾಯಿಸಬೇಕಾದ ಅನಿವಾರ್ಯತೆ ಇದೆ. ನಮ್ಮ ಸಾಂಪ್ರದಾಯಿಕ ಪದ್ಧತಿಯಲ್ಲಿಯೇ ಅಗತ್ಯವಾದ ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಹೇಳಿದರು.</p>.<p>ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಿ.ಸಿ.ರುದ್ರಪ್ರಸಾದ್, ಶಿರಾಗೇಟ್ನಲ್ಲಿ ₹ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡು 2 ವರ್ಷ ಕಳೆದರೂ ಉದ್ಘಾಟನೆಯಾಗದೆ ನನೆಗುದಿಗೆ ಬಿದ್ದಿದೆ. ಜಿಲ್ಲೆಯಲ್ಲಿ ತಜ್ಞ ವೈದ್ಯರಿದ್ದು, ಆಸ್ಪತ್ರೆಯನ್ನು ಶೀಘ್ರವಾಗಿ ಉದ್ಘಾಟಿಸುವ ಮೂಲಕ ರೈತರಿಗೆ ಉಪಯೋಗವಾಗುವಂತೆ ಮಾಡಬೇಕು ಮನವಿ ಮಾಡಿದರು.</p>.<p>ಪಶುವೈದ್ಯಕೀಯ ತಜ್ಞ ಪಿ.ಮನೋಹರ್ ಉಪಾಧ್ಯ, ಪಶುಇಲಾಖೆ ಉಪನಿರ್ದೇಶಕ ಎಲ್.ಪ್ರಕಾಶ್, ಪಶುವೈದ್ಯಕೀಯ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಂ.ನಾಗಭೂಷಣ, ಉಪಾಧ್ಯಕ್ಷ ಎ.ಸಿ.ದಿವಾಕರ್, ಮಹದೇವಯ್ಯ, ಬಿ.ಆರ್.ನಂಜೇಗೌಡ, ಡಾ.ಶಶಿಕಲಾ ಎಚ್., ಡಾ.ಶಶಿಕಾಂತ್ ಬೂದಿಹಾಳ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>