ಭಾನುವಾರ ರಾತ್ರಿ ಎರಡೂ ಗುಂಪುಗಳ ನಡುವೆ ಪರಸ್ಪರ ವಾಗ್ವಾದ, ಮಾತಿನ ಚಕಮಕಿ, ಸಣ್ಣಪುಟ್ಟ ಘರ್ಷಣೆಗಳು ಸಂಭವಿಸಿವೆ. ಹೆಬ್ಬೂರು ಠಾಣೆ ಸಬ್ಇನ್ಸ್ಪೆಕ್ಟರ್ ದೇವಿಕಾ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆಸಿದರೂ ಅದಕ್ಕೆ ಎರಡೂ ಕಡೆಯ ಗುಂಪು ಒಪ್ಪಿಲ್ಲ. ಬೆಳಗಿನ ಜಾವ 2 ಗಂಟೆಯವರೆಗೂ ಮಾತುಕತೆ ನಡೆಸಿದರೂ ಯಾರೊಬ್ಬರೂ ಪಟ್ಟು ಸಡಿಲಿಸಿಲ್ಲ. ಕೊನೆಗೆ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಪೊಲೀಸರನ್ನು ನಿಯೋಜಿಸಲಾಗಿದೆ.