<p><strong>ಗುಬ್ಬಿ:</strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ನಾಯಕರ ವಿರುದ್ಧ ಸ್ವಪಕ್ಷೀಯರನ್ನೇ ಎತ್ತಿ ಕಟ್ಟುತ್ತಾರೆ ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಟೀಕಿಸಿದ್ದಾರೆ.</p>.<p>ಸ್ವಪಕ್ಷೀಯರನ್ನೇ ಎತ್ತಿಕಟ್ಟುವ ಕೆಲಸವನ್ನು ಕುಮಾರಸ್ವಾಮಿ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಪ್ರತಿ ವಿಧಾನಾಸಭಾ ಕ್ಷೇತ್ರದಲ್ಲೂ ಇಬ್ಬರೂ ಅಭ್ಯರ್ಥಿಗಳನ್ನು ಗುರುತಿಸುವ ಜೊತೆಗೆ ಶಾಸಕರ ವಿರುದ್ಧ ಪ್ರತಿಸ್ಪರ್ಧಿ ಹುಟ್ಟು ಹಾಕುವ ಕಲೆ ರೂಢಿಸಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.</p>.<p>’ಕುಮಾರಸ್ವಾಮಿ ಅವರ ಮೇಲೆ ಬೇಸರವಿಲ್ಲ. ಅವರೇ ನನ್ನ ಮೇಲೆ ಕೋಪಿಸಿಕೊಂಡು, ನನ್ನ ವಿರುದ್ಧ ಸ್ವಪಕ್ಷಿಯರನ್ನೇ ಎತ್ತಿಕಟ್ಟುತ್ತಾ, ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯನ್ನು ಹುಡುಕುವ ಪ್ರಯತ್ನ ಮಾಡುತ್ತಿರಬಹುದು’ ಎಂದರು.</p>.<p>ಕಡಬ ಹೋಬಳಿ ಅರೆಮಾರನಹಳ್ಳಿ ಗ್ರಾಮದಲ್ಲಿ ಭಾನುವಾರ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಬಡವರ ಪರ ಕಾಳಜಿ ಹೊಂದಿದ್ದು, ಸದಾ ರೈತಪರ ಚಿಂತನೆ ಮಾಡುತ್ತಾರೆ. ಅವರ ಚೈತನ್ಯಕ್ಕೆ ಇನ್ನೂ ಇಪ್ಪತ್ತು ವರ್ಷ ಸಿಕ್ಕರೂ ಪಕ್ಷ ಸಂಘಟನೆಯನ್ನು ಬಲಿಷ್ಠ ಮಾಡಬಲ್ಲರು ಎಂದು ಶ್ರೀನಿವಾಸ್ ಹೇಳಿದರು.</p>.<p>ಮಠದಹಳ್ಳ ಕೆರೆಗೆ ಹೇಮೆ ಹರಿಸುವ ಯೋಜನೆಗೆ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಧರ್ಭದಲ್ಲಿ ಕುಮಾರಸ್ವಾಮಿಯೊಂದಿಗೆ ಚರ್ಚಿಸಿ ₹25.65 ಕೋಟಿ ವೆಚ್ಚದ ಟೆಂಡರ್ ಮುಗಿಸಿ ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಬದಲಾದ ಸರ್ಕಾರದಿಂದ ಕೆಲಸ ವಿಳಂಬವಾಯಿತು. ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ಈ ಮಠದಹಳ್ಳ ಕೆರೆಯ ಯೋಜನೆಯನ್ನು ಎತ್ತಿನಹೊಳೆ ಯೋಜನೆಗೆ ಒಳಪಡಿಸುವ ಬಗ್ಗೆ ಚರ್ಚಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ನಾಯಕರ ವಿರುದ್ಧ ಸ್ವಪಕ್ಷೀಯರನ್ನೇ ಎತ್ತಿ ಕಟ್ಟುತ್ತಾರೆ ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಟೀಕಿಸಿದ್ದಾರೆ.</p>.<p>ಸ್ವಪಕ್ಷೀಯರನ್ನೇ ಎತ್ತಿಕಟ್ಟುವ ಕೆಲಸವನ್ನು ಕುಮಾರಸ್ವಾಮಿ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಪ್ರತಿ ವಿಧಾನಾಸಭಾ ಕ್ಷೇತ್ರದಲ್ಲೂ ಇಬ್ಬರೂ ಅಭ್ಯರ್ಥಿಗಳನ್ನು ಗುರುತಿಸುವ ಜೊತೆಗೆ ಶಾಸಕರ ವಿರುದ್ಧ ಪ್ರತಿಸ್ಪರ್ಧಿ ಹುಟ್ಟು ಹಾಕುವ ಕಲೆ ರೂಢಿಸಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.</p>.<p>’ಕುಮಾರಸ್ವಾಮಿ ಅವರ ಮೇಲೆ ಬೇಸರವಿಲ್ಲ. ಅವರೇ ನನ್ನ ಮೇಲೆ ಕೋಪಿಸಿಕೊಂಡು, ನನ್ನ ವಿರುದ್ಧ ಸ್ವಪಕ್ಷಿಯರನ್ನೇ ಎತ್ತಿಕಟ್ಟುತ್ತಾ, ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯನ್ನು ಹುಡುಕುವ ಪ್ರಯತ್ನ ಮಾಡುತ್ತಿರಬಹುದು’ ಎಂದರು.</p>.<p>ಕಡಬ ಹೋಬಳಿ ಅರೆಮಾರನಹಳ್ಳಿ ಗ್ರಾಮದಲ್ಲಿ ಭಾನುವಾರ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಬಡವರ ಪರ ಕಾಳಜಿ ಹೊಂದಿದ್ದು, ಸದಾ ರೈತಪರ ಚಿಂತನೆ ಮಾಡುತ್ತಾರೆ. ಅವರ ಚೈತನ್ಯಕ್ಕೆ ಇನ್ನೂ ಇಪ್ಪತ್ತು ವರ್ಷ ಸಿಕ್ಕರೂ ಪಕ್ಷ ಸಂಘಟನೆಯನ್ನು ಬಲಿಷ್ಠ ಮಾಡಬಲ್ಲರು ಎಂದು ಶ್ರೀನಿವಾಸ್ ಹೇಳಿದರು.</p>.<p>ಮಠದಹಳ್ಳ ಕೆರೆಗೆ ಹೇಮೆ ಹರಿಸುವ ಯೋಜನೆಗೆ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಧರ್ಭದಲ್ಲಿ ಕುಮಾರಸ್ವಾಮಿಯೊಂದಿಗೆ ಚರ್ಚಿಸಿ ₹25.65 ಕೋಟಿ ವೆಚ್ಚದ ಟೆಂಡರ್ ಮುಗಿಸಿ ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಬದಲಾದ ಸರ್ಕಾರದಿಂದ ಕೆಲಸ ವಿಳಂಬವಾಯಿತು. ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ಈ ಮಠದಹಳ್ಳ ಕೆರೆಯ ಯೋಜನೆಯನ್ನು ಎತ್ತಿನಹೊಳೆ ಯೋಜನೆಗೆ ಒಳಪಡಿಸುವ ಬಗ್ಗೆ ಚರ್ಚಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>