ಇಡಗೂರು ಗ್ರಾಮದ ಜೆಡಿಎಸ್ ಕಾರ್ಯಕರ್ತ ಆನಂದ್ ಕಾರ್ಯನಿಮಿತ್ತ ಪಂಚಾಯಿತಿ ಕಚೇರಿಗೆ ತೆರಳಿದ್ದರು. ಆಗ ಬಿಜೆಪಿಯ ಗುತ್ತಿಗೆದಾರ, ಕಂಪ್ಯೂಟರ್ ಮುಂದೆ ಕುಳಿತು ಬಿಲ್ಗಳನ್ನು ಪಾಸ್ ಮಾಡುತ್ತಿರುವ ಬಗ್ಗೆ ಆಕ್ಷೇಪ ಎತ್ತಿದರು. ಈ ಕಾರಣಕ್ಕೆ ಕಾರ್ಯಕರ್ತನ ವಿರುದ್ಧ ದೂರು ನೀಡಲಾಗಿದೆ. ಗುತ್ತಿಗೆದಾರನ ಕೆಲಸಗಳಿಗೆ ಸಹಕರಿಸಿದ ಪಿಡಿಒ ಮತ್ತು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದರು.