<p><strong>ತುರುವೇಕೆರೆ</strong>: ಜನರೊಂದಿಗೆ ಜೆಡಿಎಸ್ ಪಕ್ಷವನ್ನು ಬೆಸೆಯುವ ದೃಷ್ಟಿಯಿಂದ ಪ್ರವಾಸ ಹಮ್ಮಿಕೊಂಡಿದ್ದು, 50 ಲಕ್ಷ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.</p>.<p>ಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಿಷ್ಟಾವಂತ ಕಾರ್ಯಕರ್ತರ ಪಕ್ಷ ಜೆಡಿಎಸ್. ಗ್ರಾಮೀಣ ಭಾಗದ ಕಾರ್ಯಕರ್ತರೇ ಜೆಡಿಎಸ್ ಆಧಾರ ಸ್ತಂಭ ಎಂದರು. </p>.<p>ಶಾಸಕ ಎಂ.ಟಿ.ಕೃಷ್ಣಪ್ಪ ರೈತ ಪರ ಹೋರಾಟಗಾರ. ನಾಲ್ಕು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆಲ್ಲಿಸಿ ಮಂತ್ರಿ ಮಾಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಜೆಡಿಎಸ್ ಮುಳುತ್ತಿರುವ ಪಕ್ಷ ಎಂದು ಹೇಳುವ ಕಾಂಗ್ರೆಸ್ ನಾಯಕರು ಜಿಲ್ಲೆ ಹಾಗೂ ತುರುವೇಕೆರೆಗೆ ಬಂದು ನೋಡಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 35 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಭವಿಷ್ಯ ನುಡಿದರು.</p>.<p>ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಬೇಕಿದ್ದ ಕಾರ್ಯಕ್ರಮ ತಡವಾಗಿದ್ದರಿಂದ ಶಾಸಕ ಎಂ.ಟಿ.ಕೃಷ್ಣಪ್ಪ ಹಾಡು ಹಾಡಿ ಕಾರ್ಯಕರ್ತರನ್ನು ರಂಚಿಸಿದರು.</p>.<p>ಶಾಸಕ ಸುರೇಶ್ ಬಾಬು, ಜಿಲ್ಲಾಧ್ಯಕ್ಷ ಅಂಜನಪ್ಪ, ತಾಲ್ಲೂಕು ಅಧ್ಯಕ್ಷ ದೊಡ್ಡೇಗೌಡ, ತಿಪ್ಪೇಸ್ವಾಮಿ, ರಮೇಶ್ ಗೌಡ, ದೊಡ್ಡಾಘಟ್ಟ ಚಂದ್ರೇಶ್, ರಾಜೀವ್, ವೆಂಕಟೇಶ್, ಲೀಲಾವತಿ ಗಿಡ್ಡಯ್ಯ, ಪಿ.ಎಚ್.ಧನಪಾಲ್, ಶಂಕರೇಗೌಡ, ಯಡಗಿಹಳ್ಳಿ ವಿಶ್ವನಾಥ್, ಚಂದ್ರೇಶ್, ತ್ಯಾಗರಾಜು, ವೆಂಕಾಟಪುರ ಯೋಗೀಶ್, ವಿಜಯಕುಮಾರ್, ಬಸವರಾಜು, ರಾಘು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ಜನರೊಂದಿಗೆ ಜೆಡಿಎಸ್ ಪಕ್ಷವನ್ನು ಬೆಸೆಯುವ ದೃಷ್ಟಿಯಿಂದ ಪ್ರವಾಸ ಹಮ್ಮಿಕೊಂಡಿದ್ದು, 50 ಲಕ್ಷ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.</p>.<p>ಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಿಷ್ಟಾವಂತ ಕಾರ್ಯಕರ್ತರ ಪಕ್ಷ ಜೆಡಿಎಸ್. ಗ್ರಾಮೀಣ ಭಾಗದ ಕಾರ್ಯಕರ್ತರೇ ಜೆಡಿಎಸ್ ಆಧಾರ ಸ್ತಂಭ ಎಂದರು. </p>.<p>ಶಾಸಕ ಎಂ.ಟಿ.ಕೃಷ್ಣಪ್ಪ ರೈತ ಪರ ಹೋರಾಟಗಾರ. ನಾಲ್ಕು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆಲ್ಲಿಸಿ ಮಂತ್ರಿ ಮಾಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಜೆಡಿಎಸ್ ಮುಳುತ್ತಿರುವ ಪಕ್ಷ ಎಂದು ಹೇಳುವ ಕಾಂಗ್ರೆಸ್ ನಾಯಕರು ಜಿಲ್ಲೆ ಹಾಗೂ ತುರುವೇಕೆರೆಗೆ ಬಂದು ನೋಡಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 35 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಭವಿಷ್ಯ ನುಡಿದರು.</p>.<p>ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಬೇಕಿದ್ದ ಕಾರ್ಯಕ್ರಮ ತಡವಾಗಿದ್ದರಿಂದ ಶಾಸಕ ಎಂ.ಟಿ.ಕೃಷ್ಣಪ್ಪ ಹಾಡು ಹಾಡಿ ಕಾರ್ಯಕರ್ತರನ್ನು ರಂಚಿಸಿದರು.</p>.<p>ಶಾಸಕ ಸುರೇಶ್ ಬಾಬು, ಜಿಲ್ಲಾಧ್ಯಕ್ಷ ಅಂಜನಪ್ಪ, ತಾಲ್ಲೂಕು ಅಧ್ಯಕ್ಷ ದೊಡ್ಡೇಗೌಡ, ತಿಪ್ಪೇಸ್ವಾಮಿ, ರಮೇಶ್ ಗೌಡ, ದೊಡ್ಡಾಘಟ್ಟ ಚಂದ್ರೇಶ್, ರಾಜೀವ್, ವೆಂಕಟೇಶ್, ಲೀಲಾವತಿ ಗಿಡ್ಡಯ್ಯ, ಪಿ.ಎಚ್.ಧನಪಾಲ್, ಶಂಕರೇಗೌಡ, ಯಡಗಿಹಳ್ಳಿ ವಿಶ್ವನಾಥ್, ಚಂದ್ರೇಶ್, ತ್ಯಾಗರಾಜು, ವೆಂಕಾಟಪುರ ಯೋಗೀಶ್, ವಿಜಯಕುಮಾರ್, ಬಸವರಾಜು, ರಾಘು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>